ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ದಾರಿ ತಪ್ಪಿದ ಎಚ್.ಡಿ.ಕೆ ಹೆಲಿಕಾಪ್ಟರ್: 30 ನಿಮಿಷ ಆಗಸದಲ್ಲೇ ಹಾರಾಟದ ನಂತರ ಜೋಯಿಡಾದಲ್ಲಿ ಲ್ಯಾಂಡಿಂಗ್!

ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿಗೆ ಕಾರಣಾಂತರಗಳಿಂದ ಕಾರ್ಯಕ್ರಮಗಳಿಗೆ ತಡವಾಗಿ ಬರುವುದು ಹೊಸದೇನಲ್ಲ. ಮಂಗಳವಾರ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿದ ಕಾರಣ ಕಾರ್ಯಕ್ರಮಕ್ಕೆ ತಡವಾಗಿ ಬಂದರು.

ಉತ್ತರ ಕನ್ನಡ: ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿಗೆ ಕಾರಣಾಂತರಗಳಿಂದ ಕಾರ್ಯಕ್ರಮಗಳಿಗೆ ತಡವಾಗಿ ಬರುವುದು ಹೊಸದೇನಲ್ಲ. ಮಂಗಳವಾರ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿದ ಕಾರಣ ಕಾರ್ಯಕ್ರಮಕ್ಕೆ ತಡವಾಗಿ ಬಂದರು.

ಹೆಲಿಕಾಪ್ಟರ್ ಲ್ಯಾಂಡಿಂಗ್ ನೋಡಲು ಜೋಯಿಡಾ ಕಾಲೇಜು ಮೈದಾನದಲ್ಲಿ ನೂರಾರು ಜನರು ಕಾದು ನಿಂತಿದ್ದರು.  ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಸವದತ್ತಿಯಿಂದ ಜೋಯಿಡಾದ ದುರ್ಗಾದೇವಿ ಮೈದಾನದಲ್ಲಿ  ಲ್ಯಾಂಡಿಂಗ್ ಆಗಬೇಕಿತ್ತು. ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್‌ನಲ್ಲಿ ಗಂಧಕದ ಹೊಗೆ ಹಾಕಿ ಸಿಗ್ನಲ್ ನೀಡಬೇಕಿತ್ತು.

ಆದರೆ ಇದು ತಡವಾಗಿದ್ದರಿಂದ ಹೆಲಿಕಾಪ್ಟರ್ ಆಕಾಶದಲ್ಲೇ ಹಾರಾಡಿದೆ. ನಂತರ ಲ್ಯಾಂಡಿಗ್ ಮಾಡಲು ಸ್ಥಳ ಸಿಗದೆ ಬೆಳಗಾವಿಯತ್ತ ಹೋಗಿದೆ. ಈ ವಿಷಯ ಗಮನಕ್ಕೆ ಬಂದ ನಂತರ ವೈರ್‌ಲೆಸ್ ಸಿಗ್ನಲ್ ಕಳುಹಿಸಿ ಹೆಲಿಕಾಪ್ಟರನ್ನು ಮರಳಿ ಕರೆಸಿ ಲ್ಯಾಂಡಿಂಗ್ ಮಾಡಲಾಯಿತು.

ಈ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಹೆಲಿಕಾಪ್ಟರ್ ಲ್ಯಾಂಡಿಂಗ್ ಸಮಸ್ಯೆಯಿಂದ ಜೋಯಿಡಾಗೆ ಬರಲು 30 ನಿಮಿಷ ತಡವಾಯಿತು. ಇದರಿಂದಾಗಿ ಏನೂ ಸಮಸ್ಯೆಯಾಗಿಲ್ಲ ಎಂದರು.

ಜೋಯಿಡಾದಲ್ಲಿ ಸ್ಥಳವನ್ನು ಕಂಡುಹಿಡಿಯುವ ಮೊದಲು ಹೆಲಿಕಾಪ್ಟರ್ ರಾಮನಗರವನ್ನು ಏಳು ಬಾರಿ ಸುತ್ತು ಹಾಕಿತು ಎಂದು ಪಕ್ಷದ ಕಾರ್ಯಕರ್ತರಿಗೆ ತಿಳಿಸಿದರು. ಇದು ಅರಣ್ಯ ಪ್ರದೇಶವಾದ್ದರಿಂದ ಸ್ವಲ್ಪ ಗೊಂದಲ ಉಂಟಾಗಿ, ನಿಮ್ಮ ಊರನ್ನು ಪತ್ತೆ ಹಚ್ಚುವುದು ಕಷ್ಟವಾಯಿತು  ಎಂದು ತಮ್ಮ ಪಕ್ಷದ ಕಾರ್ಯಕರ್ತರ ಜೊತೆ ಕುಮಾರಸ್ವಾಮಿ ತಮಾಷೆಯಾಗಿ ಮಾತನಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCCಗೆ ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ.ಪಾಟೀಲ್

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

SCROLL FOR NEXT