ಜಿ.ಪರಮೇಶ್ವರ್ 
ರಾಜ್ಯ

ಅಹಿಂದ ಯೋಜನೆ, ಉಚಿತ ವಿದ್ಯುತ್, ಭ್ರಷ್ಟಾಚಾರ ನಿರ್ಮೂಲನಕ್ಕೆ ಪ್ರಣಾಳಿಕೆಯಲ್ಲಿ ಒತ್ತು: ಜಿ.ಪರಮೇಶ್ವರ್

ಉದ್ಯೋಗ, ಭ್ರಷ್ಟಾಚಾರ ಮುಕ್ತ ಹಾಗೂ ಜನರ ಜ್ವಲಂತ ಸಮಸ್ಯೆ ನಿವಾರಣೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಒತ್ತು ನೀಡಲಾಗುವುದು ಎಂದು ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಹೇಳಿದರು.

ಬೆಂಗಳೂರು: ಉದ್ಯೋಗ, ಭ್ರಷ್ಟಾಚಾರ ಮುಕ್ತ ಹಾಗೂ ಜನರ ಜ್ವಲಂತ ಸಮಸ್ಯೆ ನಿವಾರಣೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಒತ್ತು ನೀಡಲಾಗುವುದು ಎಂದು ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಣಾಳಿಕೆ ತಯಾರಿಗೆ ನಾಲ್ಕು ತಿಂಗಳ ಹಿಂದೆ ನಮಗೆ ಜವಾಬ್ದಾರಿ ‌ಕೊಡಲಾಗಿತ್ತು. ಜನಪರವಾದ ಪ್ರಣಾಳಿಕೆ ತಯಾರಿಸಲು ಲಕ್ಷಾಂತರ ಜನರ ಜೊತೆ ಚರ್ಚೆ ಮಾಡಿದ್ದೇವೆ. ನೌಕರರ ವರ್ಗದ ಜೊತೆ ಚರ್ಚೆ ಮಾಡಿದ್ದೇವೆ. ಎಫ್ ಕೆ ಸಿಸಿ ಅವರ ಜೊತೆ ಸುಧೀರ್ಘವಾಗಿ ಚರ್ಚೆ ಮಾಡಿದ್ದೇವೆ ಅಷ್ಟೇ ಅಲ್ಲದೆ, ಜಿಲ್ಲಾವಾರು ಅಧಿಕಾರಿಗಳ ಕರೆದು ಚರ್ಚೆ ಮಾಡಿದ್ದೇವೆ ಎಂದರು.

ಜನರ ಜ್ವಲಂತ ಸಮಸ್ಯೆಗಳ ಜೊತೆಗೆ ಖಾಲಿ ಇರುವ 2.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದು ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು, ಸೇರಿದಂತೆ ಹಲವು ವಿಷಯಗಳ ಸಂಬಂಧ ಜನರ ಅಭಿಪ್ರಾಯ ಹಾಗೂ ಸಲಹೆ ಪಡೆದಿದ್ದೇವೆ ಎಂದರು.

ಪಾವಗಡದಲ್ಲಿ ಸೋಲಾರ್ ಪಾರ್ಕ್ ಮಾಡಿದ್ದೇವೆ‌. ರೈತನಿಗೆ ವಿದ್ಯುತ್ ಪೂರೈಕೆ ಇದುವರೆಗೆ ಸಾಧ್ಯವಾಗಿಲ್ಲ. ಉಚಿತ ವಿದ್ಯುತ್ ಪೂರೈಕೆ ಗೆ ಬೇಕಾದ ಕೆಲಸಗಳನ್ನು ಮಾಡುತ್ತೇವೆ. ಹಿಂದುಳಿದ ದಲಿತ ಅಲ್ಪಸಂಖ್ಯಾತ ಸಮುದಾಯಗಳಿಗೆ ನಿರ್ದಿಷ್ಟ ಕಾರ್ಯಕ್ರಮ ನೀಡಬೇಕು.

ಟೂರಿಸಂನಲ್ಲಿ ನಾವು ಬಹಳ ಹಿಂದೆ ಉಳಿದಿದ್ದೇವೆ. ಪಕ್ಕದ ಕೇರಳದಲ್ಲಿ ಕೋಟ್ಯಾಂತರ ರೂ. ಟೂರಿಸಂನಿಂದಲೇ ಬರುತ್ತದೆ. ಟೂರಿಸಂ ಅಭಿವೃದ್ಧಿ ಕೂಡ ಗಣನೆಗೆ ತೆಗೆದುಕೊಂಡಿದ್ದೇವೆ ಎಂದರು. ನಾವು ಕೇರಳದ ಮಾದರಿಯಲ್ಲಿ ರಾಜ್ಯದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಅನ್ವೇಷಿಸಬೇಕಾಗಿದೆ. ಉದ್ಯೋಗವಿಲ್ಲದೆ ಬೀದಿ ಪಾಲಾಗಿರುವ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೂ ಗಮನ ಹರಿಸಲಾಗಿದೆ' ಎಂದರು.

ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಪ್ರತೀಕ, ಆದರೆ ದೇವಸ್ಥಾನ ನಿರ್ವಹಣೆ ಮಾಡುವುದಕ್ಕೆ ಯೋಜನೆಗಳ ಅವಶ್ಯಕತೆ ಇದೆ. ಧಾರ್ಮಿಕ ಸಾಮರಸ್ಯ ಇಡೀ ರಾಜ್ಯದಲ್ಲಿ ಅತ್ಯಗತ್ಯವಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT