ಹಳ್ಳಕ್ಕೆ ಬಿದ್ದ ಆನೆ ಹಿಂಡು 
ರಾಜ್ಯ

ಹಳ್ಳಕ್ಕೆ ಬಿದ್ದ 4 ಕಾಡಾನೆಗಳು: ಅರಣ್ಯ ಇಲಾಖೆ ಹರಸಾಹಸದ ಬಳಿಕ ಆನೆಗಳು ಸುರಕ್ಷಿತವಾಗಿ ಕಾಡಿಗೆ!

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನೀರು ಅರಸಿ ಬಂದು ಕೆರೆಗೆ ಬಿದ್ದಿದ್ದ ನಾಲ್ಕು ಕಾಡಾನೆಗಳ ಹಿಂಡನ್ನು ಅರಣ್ಯಾಧಿಕಾರಿಗಳು ಗುರುವಾರ ರಕ್ಷಿಸಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನೀರು ಅರಸಿ ಬಂದು ಕೆರೆಗೆ ಬಿದ್ದಿದ್ದ ನಾಲ್ಕು ಕಾಡಾನೆಗಳ ಹಿಂಡನ್ನು ಅರಣ್ಯಾಧಿಕಾರಿಗಳು ಗುರುವಾರ ರಕ್ಷಿಸಿದ್ದಾರೆ.

ಸನತ್ ರೈ ಎಂಬುವವರ  ಒಡೆತನದ ಅಡಿಕೆ ತೋಟದಲ್ಲಿ ಎರಡು ಮರಿಗಳಿದ್ದ ಆನೆ ಹಿಂಡು ಹೊಂಡಕ್ಕೆ ಬಿದ್ದಿದೆ. ಪ್ರಾಣಿಗಳನ್ನು ಗಮನಿಸಿದ ಸನತ್ ಮತ್ತು ಇತರ ಸ್ಥಳೀಯರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಗುರುವಾರ ಬೆಳಿಗ್ಗೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್, ಮೊದಲು ಆನೆ ಮರಿ ಒಂದು ಕೆರೆಯಲ್ಲಿ ಬಿದ್ದು ಕೆಸರಿನಲ್ಲಿ ಸಿಲುಕಿದೆ. ಬಳಿಕ ಮರಿಯನ್ನು ರಕ್ಷಿಸಲು, ಆನೆಗಳು ಕೊಳವನ್ನು ಪ್ರವೇಶಿಸಿರಬಹುದು, ಆದರೆ ಮತ್ತೆ ಏರಲು ವಿಫಲವಾಗಿವೆ. ಅಥವಾ ಹಿಂಡು ಕೆರೆಯಲ್ಲಿ ದಾಹ ನೀಗಿಸಿಕೊಳ್ಳಲು ಯತ್ನಿಸಿ ಸಿಲುಕಿಕೊಂಡಿರಬಹುದು’ ಎಂದು ಹೇಳಿದ್ದಾರೆ.

“ನಾವು ಆನೆಗಳನ್ನು ಹಳ್ಳದ ಗಡಿಯ ಒಂದು ಭಾಗವನ್ನು ಜೆಸಿಬಿ ಬಳಸಿ ಒಡೆದು ಕೊಳದಿಂದ ಹೊರಬರಲು ಸಹಾಯ ಮಾಡಿದೆವು. ಆನೆಗಳಲ್ಲಿ ಒಂದು ಆರಂಭದಲ್ಲಿ ಕೊಳದ ಹೊರಗೆ ಏರಲು ಯಶಸ್ವಿಯಾಯಿತು. ನಂತರ, ಮತ್ತೊಂದು ವಯಸ್ಕ ಆನೆ ಮತ್ತು ಒಂದು ಮರಿ ಕೂಡ ಸುರಕ್ಷಿತವಾಗಿ ಹೊರಬಂದವು. ಆದರೆ, ಒಂದು ಮರಿ ನೀರಿನಲ್ಲಿ ಸಿಲುಕಿಕೊಂಡಿದ್ದು, ನಂತರ ಅದನ್ನು ರಕ್ಷಿಸಿದೆವು. ಅದನ್ನು ಹಿಂಡಿನೊಂದಿಗೆ ಮತ್ತೆ ಸೇರಿಸುತ್ತೇವೆ’ ಎಂದು ಪ್ರವೀಣ್ ಹೇಳಿದರು. ಇದೇ ವೇಳೆ ಅರಣ್ಯಾಧಿಕಾರಿಗಳು ಕಾಡಾನೆಗಳನ್ನು ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ವಿಷಯ ತಿಳಿದು ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯ ಆರಂಭಿಸಿದರು.‌ ಕೆರೆಯಿಂದ ರಸ್ತೆ ನಿರ್ಮಿಸಿದರೆ ಆನೆಗಳು ಕೆರೆಯಿಂದ ಮೇಲೆ ಬರುತ್ತವೆ. ಆ ನಿಟ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ಜೆಸಿಬಿ ತರಿಸಿ ಕೆರೆಯ ಒಂದು ದಡವನ್ನು ಅಗಲ ಮಾಡಿ ಆನೆಗಳು ಮೇಲೆ ಬರಲು ದಾರಿ ಮಾಡಿಕೊಡಲು ಪ್ರಯತ್ನಿಸಲಾಯಿತು.  ಎಂದು ಆರ್‌ಎಫ್‌ಒ ಮಂಜುನಾಥ್ ತಿಳಿಸಿದ್ದಾರೆ.

ಸುಳ್ಯದ ಅಜ್ಜಾವರ, ಮಂಡೆಕೋಲು ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲಿ ಕಾಡಾನೆಗಳು ತೋಟ ಹಾಗೂ ಗದ್ದೆಗಳಿಗೆ ನುಗ್ಗುತ್ತಿವೆ. ಈ ಹಾವಳಿಯನ್ನು ತಗ್ಗಿಸುವಂತೆ ಸುತ್ತಲಿನ ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನು ಕೇಳಿದ್ದಾರೆ. ಅಲ್ಲದೆ, ಈಗ ಅಜ್ಜಾವರ ಬಳಿಯ ಕೆರೆಯಲ್ಲಿ ಸಿಲುಕಿರುವ ಆನೆಗಳನ್ನು ಸೆರೆ ಹಿಡಿದು ಆನೆ ಬಿಡಾರಗಳಿಗೆ ಸಾಗಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT