ಹೈಕೋರ್ಟ್ 
ರಾಜ್ಯ

ಮಕ್ಕಳ ಶಿಕ್ಷಣ ಪಡೆಯುವ ಹಕ್ಕು ಕಸಿಯಲಾಗದು, ಸರ್ಕಾರ 4 ತಿಂಗಳಲ್ಲಿ ಶಾಲೆಗೆ ಕಟ್ಟಡ ನಿರ್ಮಿಸಬೇಕು: ಹೈಕೋರ್ಟ್ ಆದೇಶ

ಸಂವಿಧಾನದ 21-ಎ ಪರಿಚ್ಛೇದದ ಅಡಿಯಲ್ಲಿ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಂಡ್ಯದ ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶಿಸಿದೆ.

ಬೆಂಗಳೂರು: ಸಂವಿಧಾನದ 21-ಎ ಪರಿಚ್ಛೇದದ ಅಡಿಯಲ್ಲಿ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್  ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಂಡ್ಯದ ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶಿಸಿದೆ. ಜೂನ್ 1 ರಿಂದ ನಾಲ್ಕು ತಿಂಗಳೊಳಗೆ ಅಗರಲಿಂಗನ ದೊಡ್ಡಿ ಗ್ರಾಮದಲ್ಲಿ ಜಮೀನು ಗುರುತಿಸಿ ಹೊಸ ಕಿರಿಯ ಪ್ರಾಥಮಿಕ ಶಾಲೆ ನಿರ್ಮಿಸಬೇಕು ಎಂದು ಆದೇಶ ನೀಡಿದೆ. 

35 ವರ್ಷಗಳ ಹಿಂದೆ ಗ್ರಾಮಸ್ಥರು ನೀಡಿದ ಜಮೀನಿನಲ್ಲಿ ಇಲ್ಲಿ ಶಾಲೆ ನಿರ್ಮಿಸಿ ಪಾಠ-ಪ್ರವಚನಗಳು ನಡೆಯುತ್ತಿದ್ದವು. ಆದರೆ 2018ರಲ್ಲಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಗೆ ರಸ್ತೆ ಅಗಲೀಕರಣಕ್ಕಾಗಿ ಶಾಲೆಯ ಕಟ್ಟಡ ಧ್ವಂಸಗೊಳಿಸಬೇಕಾಗಿ ಬಂದಿದ್ದರಿಂದ ಶಾಲೆಯ 25 ಮಕ್ಕಳು ಇಂದು ಸಣ್ಣ ಕೊಠಡಿಯಲ್ಲಿ ಓದುವ ದುಸ್ಥಿತಿ ಬಂದಿದೆ.

“ಪ್ರತಿಯೊಬ್ಬ ನಾಗರಿಕನ ಹಕ್ಕು ಮುಖ್ಯ ಮತ್ತು ಯಾವುದೇ ಮಗುವನ್ನು ಶಿಕ್ಷಣದಿಂದ ವಂಚಿಸಲು ಸಾಧ್ಯವಿಲ್ಲ ಎಂಬುದನ್ನು ರಾಜ್ಯದ ಅಧಿಕಾರಿಗಳು ನೆನಪಿನಲ್ಲಿಡಬೇಕು. ಈ ನ್ಯಾಯಾಲಯದ ಮುಂದಿರುವ ಸಮಸ್ಯೆ ಕೇವಲ ಒಂದು ಶಾಲೆ ಅಲ್ಲ, ಇದು ಒಂದು ಶಾಲೆ ಕೂಡ ಮಕ್ಕಳ ಮೂಲಭೂತ ಹಕ್ಕನ್ನು ಕಸಿಯಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹೇಳಿದರು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಂ.ಎಚ್. ಪ್ರಕಾಶ್, ಶಾಲಾ ಅಭಿವೃದ್ಧಿ ಮೇಲ್ವಿಚಾರಣಾ ಸಮಿತಿ (SDMC) - ಶಾಲೆಯನ್ನು ಸಣ್ಣ ಕೊಠಡಿಯಿಂದ ನಡೆಸಲಾಗುತ್ತಿದೆ, ಅಲ್ಲಿ ಬೆಂಚುಗಳಿಲ್ಲ, ಅಡುಗೆ ಮಾಡಲು ಸ್ಥಳವಿಲ್ಲ, ಶೌಚಾಲಯ, ಬಾತ್ ರೂಂ ವ್ಯವಸ್ಥೆಯಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. 

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು 66.95 ಲಕ್ಷ ರೂಪಾಯಿ ಪರಿಹಾರವನ್ನು ನೀಡಿದ್ದರೂ, ಎಸ್‌ಡಿಎಂಸಿ ಮಾರ್ಚ್ 2020 ರಿಂದ ಅಧಿಕಾರಿಗಳಿಗೆ ಹಲವು ನಿರೂಪಣೆಗಳನ್ನು ಸಲ್ಲಿಸಿದ್ದರೂ, ರಾಜ್ಯವು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ. ಪರಿಹಾರದ ಮೊತ್ತವನ್ನು ಮೊದಲು ರಾಜ್ಯದ ಕ್ರೋಢೀಕೃತ ನಿಧಿಗೆ ಬರಬೇಕು. ನಂತರವೇ ಹೊಸ ಶಾಲಾ ಕಟ್ಟಡಕ್ಕೆ ಬಿಡುಗಡೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳುತ್ತಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT