ಪ್ರತ್ಯಕ್ಷ ದೃಶ್ಯ 
ರಾಜ್ಯ

ಮಡಿಕೇರಿ: ಕೆಎಸ್ಆರ್ ಟಿಸಿ ಬಸ್ ಕಾರು ನಡುವೆ ಭೀಕರ ಅಪಘಾತ; ಆರು ಮಂದಿ ದುರ್ಮರಣ

ಮಂಗಳೂರು-ಮಡಿಕೇರಿ ಹೆದ್ದಾರಿಯ ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿ ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಮಡಿಕೇರಿ: ಮಂಗಳೂರು-ಮಡಿಕೇರಿ ಹೆದ್ದಾರಿಯ ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿ ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಕೆಎಸ್ಆರ್ ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರಿನ ನಡುವೆ ಈ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. 

ಕಾರಿನಲ್ಲಿ ಪ್ರಮಾಣಿಸುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನುಳಿದ ಮೂವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.

ಕೆಎಸ್ಆರ್ ಟಿಸಿ ಬಸ್ ಮಂಗಳೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿತ್ತು. ಇನ್ನು ಕಾರು ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡಿರುವ ಮತ್ತಿಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಶಾಂತಿ ಒಪ್ಪಂದಕ್ಕೆ ‘NO’ ಎಂದ ಟ್ರಂಪ್; ಖಾರ್ಗ್ ದ್ವೀಪದ ಮೇಲೆ ಅಮೆರಿಕಾ ಕಣ್ಣು; ದಾಳಿ ಭೀತಿ ಮತ್ತಷ್ಟು ಹೆಚ್ಚಳ..!

'ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ: ಅಗತ್ಯಬಿದ್ರೆ ಸಮರ್ಥ್ ನಾಮಪತ್ರ ವಾಪಸ್'

ದಾವಣಗೆರೆ: ಕಾಂಗ್ರೆಸ್‌ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು; ಮುಸ್ಲಿಂ ನಾಯಕರಿಂದ ಬಂಡಾಯದ ಎಚ್ಚರಿಕೆ- ಶಾಮನೂರು ಕುಟುಂಬ ಪರ ಡಿಸಿಎಂ ಬ್ಯಾಟಿಂಗ್

ಮುಖ್ಯರಸ್ತೆ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ವಾರಾನುಗಟ್ಟಲೆ ರಸ್ತೆಯಲ್ಲಿ ನಿಲ್ಲಿಸಲಾದ ಹಳೇಯ ವಾಹನಗಳು ಡಂಪ್ ; ಡಿ.ಕೆ. ಶಿವಕುಮಾರ್

ಯಕ್ಷಗಾನ ರಂಗದ ಮೇರು ಕಲಾವಿದ, ಕಲಾತಪಸ್ವಿ ಸೂರಿಕುಮೇರು ಗೋವಿಂದ ಭಟ್ ಅಸ್ತಂಗತ

SCROLL FOR NEXT