ಮಾಡಾಳ್ ವಿರೂಪಾಕ್ಷಪ್ಪ 
ರಾಜ್ಯ

ಭ್ರಷ್ಟಾಚಾರ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು, ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದ್ದು, ಆರೋಪಿ ಶಾಸಕ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ...

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದ್ದು, ಆರೋಪಿ ಶಾಸಕ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಮಾಡಾಳ್ ವಿರೂಪಾಕ್ಷ ಅವರು, ಸುಮಾರು 15 ದಿನಗಳ ಜೈಲು ವಾಸದ ಬಳಿ ಇಂದು ಸಂಜೆ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮಾಡಾಳ್, ಭಾರತದ ನ್ಯಾಯಾಂಗದ ಬಗ್ಗೆ ನನಗೆ ವಿಶ್ವಾಸದೆ. ಈ ಆರೋಪದಿಂದ ನಾನು ಮುಕ್ತನಾಗುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಮುಂದಿನ ರಾಜಕೀಯ ನಡೆ ಬಗ್ಗೆ ಪ್ರತಿಕ್ರಿಯಿಸಿದ ಮಾಡಾಳ್, ನಾನು ಈಗ ಏನನ್ನ ಹೇಳುವ ಪರಿಸ್ಥಿತಿಯಲ್ಲಿಲ್ಲ. ಹೊರಗಡೆ ಏನು ನಡೆದಿದೆ ಎಂಬುದರ ಅರಿವು ನನಗೆ ಇಲ್ಲ. ಮನೆಗೆ ಹೋಗಿ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT