ಸಿಎಂ ಬೊಮ್ಮಾಯಿ 
ರಾಜ್ಯ

ಜಗದೀಶ್ ಶೆಟ್ಟರ್ ಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ: ಸಿಎಂ ಬೊಮ್ಮಾಯಿ

ರಾಜಕಾರಣಕ್ಕೆ ಬರುವುದಕ್ಕಿಂತ ಮೊದಲಿನಿಂದಲೂ ಜಗದೀಶ್ ಶೆಟ್ಟರ್ ಹಾಗೂ ನಾನು ಸ್ನೇಹಿತರು. ಅವರಿಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ. ಅವರ ಬೆಂಬಲಿಗರ ಮಾತಿನಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

ಹುಬ್ಬಳ್ಳಿ: ರಾಜಕಾರಣಕ್ಕೆ ಬರುವುದಕ್ಕಿಂತ ಮೊದಲಿನಿಂದಲೂ ಜಗದೀಶ್ ಶೆಟ್ಟರ್ ಹಾಗೂ ನಾನು ಸ್ನೇಹಿತರು. ಅವರಿಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ. ಅವರ ಬೆಂಬಲಿಗರ ಮಾತಿನಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ಕೊಡಿಸಲು ಸರ್ವ ಪ್ರಯತ್ನ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ನಿತ್ಯವೂ ವರಿಷ್ಠರೊಂದಿಗೆ ಸಂಪರ್ಕದಲ್ಲಿದ್ದೇವೆ. ಆದರೆ, ಟಿಕೆಟ್ ತಪ್ಪಿಸಲು ಯತ್ನಿಸಲಾಗುತ್ತಿದೆ ಎಂದು ಹೇಳುವುದರಲ್ಲಿ ಸತ್ಯವಿಲ್ಲ ಎಂದು ಹೇಳಿದರು.

ಜಗದೀಶ ಶೆಟ್ಟರ್ ಬಿಜೆಪಿಯ ನಿಷ್ಠಾವಂತ ನಾಯಕರಾಗಿದ್ದು, ಅವರದ್ದು ಜನಸಂಘ ಕಾಲದ ಮನೆತನ.‌ ಉತ್ತರ ಕರ್ನಾಟಕ ಭಾಗಕ್ಕೆ ಅವರು ಅಗತ್ಯವಾಗಿದ್ದು, ಸಕ್ರಿಯ ರಾಜಕಾರಣದಲ್ಲಿ ಉಳಿಸಿಕೊಳ್ಳಬೇಕೆಂದು ವರಿಷ್ಠರೊಂದಿಗೆ ಮಾತನಾಡುತ್ತಿದ್ದೇವೆ ಎಂದು ತಿಳಿಸಿದರು.

ನಾನು ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿದ್ದರೆ ದಾಖಲೆಗಳನ್ನು ಬಿಡುಗಡೆ ಮಾಡಲಿ. ನೀರಾವರಿ ಯೋಜನೆಯಲ್ಲಿ ನಡೆದ ಹಗರಣದಲ್ಲಿ ನೆಹರು ಓಲೇಕಾರ ಅವರಿಗೆ ಶಿಕ್ಷೆ ಆಗಿದೆ. ಅದನ್ನ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT