ಸಿಎಂ ಬೊಮ್ಮಾಯಿ 
ರಾಜ್ಯ

ಜಗದೀಶ್ ಶೆಟ್ಟರ್ ಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ: ಸಿಎಂ ಬೊಮ್ಮಾಯಿ

ರಾಜಕಾರಣಕ್ಕೆ ಬರುವುದಕ್ಕಿಂತ ಮೊದಲಿನಿಂದಲೂ ಜಗದೀಶ್ ಶೆಟ್ಟರ್ ಹಾಗೂ ನಾನು ಸ್ನೇಹಿತರು. ಅವರಿಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ. ಅವರ ಬೆಂಬಲಿಗರ ಮಾತಿನಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

ಹುಬ್ಬಳ್ಳಿ: ರಾಜಕಾರಣಕ್ಕೆ ಬರುವುದಕ್ಕಿಂತ ಮೊದಲಿನಿಂದಲೂ ಜಗದೀಶ್ ಶೆಟ್ಟರ್ ಹಾಗೂ ನಾನು ಸ್ನೇಹಿತರು. ಅವರಿಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ. ಅವರ ಬೆಂಬಲಿಗರ ಮಾತಿನಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ಕೊಡಿಸಲು ಸರ್ವ ಪ್ರಯತ್ನ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ನಿತ್ಯವೂ ವರಿಷ್ಠರೊಂದಿಗೆ ಸಂಪರ್ಕದಲ್ಲಿದ್ದೇವೆ. ಆದರೆ, ಟಿಕೆಟ್ ತಪ್ಪಿಸಲು ಯತ್ನಿಸಲಾಗುತ್ತಿದೆ ಎಂದು ಹೇಳುವುದರಲ್ಲಿ ಸತ್ಯವಿಲ್ಲ ಎಂದು ಹೇಳಿದರು.

ಜಗದೀಶ ಶೆಟ್ಟರ್ ಬಿಜೆಪಿಯ ನಿಷ್ಠಾವಂತ ನಾಯಕರಾಗಿದ್ದು, ಅವರದ್ದು ಜನಸಂಘ ಕಾಲದ ಮನೆತನ.‌ ಉತ್ತರ ಕರ್ನಾಟಕ ಭಾಗಕ್ಕೆ ಅವರು ಅಗತ್ಯವಾಗಿದ್ದು, ಸಕ್ರಿಯ ರಾಜಕಾರಣದಲ್ಲಿ ಉಳಿಸಿಕೊಳ್ಳಬೇಕೆಂದು ವರಿಷ್ಠರೊಂದಿಗೆ ಮಾತನಾಡುತ್ತಿದ್ದೇವೆ ಎಂದು ತಿಳಿಸಿದರು.

ನಾನು ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿದ್ದರೆ ದಾಖಲೆಗಳನ್ನು ಬಿಡುಗಡೆ ಮಾಡಲಿ. ನೀರಾವರಿ ಯೋಜನೆಯಲ್ಲಿ ನಡೆದ ಹಗರಣದಲ್ಲಿ ನೆಹರು ಓಲೇಕಾರ ಅವರಿಗೆ ಶಿಕ್ಷೆ ಆಗಿದೆ. ಅದನ್ನ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT