ಸಂಗ್ರಹ ಚಿತ್ರ 
ರಾಜ್ಯ

ಎಚ್‌ಯುಎಫ್ ಉಳಿತಾಯ ಖಾತೆಯಲ್ಲಿ ಠೇವಣಿಯಿಟ್ಟ ಹಣಕ್ಕೆ ಬಡ್ಡಿ ನೀಡಲು ನಕಾರ: ಅಂಚೆ ಇಲಾಖೆಗೆ ಹೈಕೋರ್ಟ್‌ ತರಾಟೆ

ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಯೋಜನೆಯಡಿ ತೆರೆಯಲಾದ ಹಿಂದು ಅವಿಭಕ್ತ ಕುಟುಂಬ (ಎಚ್‌ಯುಎಫ್) ಉಳಿತಾಯ ಖಾತೆಯಲ್ಲಿ ಠೇವಣಿಯಿಟ್ಟ ಹಣಕ್ಕೆ ಬಡ್ಡಿ ನೀಡಲು ನಿರಾಕರಿಸಿದ್ದ ಭಾರತೀಯ ಅಂಚೆ ಇಲಾಖೆಯನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತು.

ಬೆಂಗಳೂರು: ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಯೋಜನೆಯಡಿ ತೆರೆಯಲಾದ ಹಿಂದು ಅವಿಭಕ್ತ ಕುಟುಂಬ (ಎಚ್‌ಯುಎಫ್) ಉಳಿತಾಯ ಖಾತೆಯಲ್ಲಿ ಠೇವಣಿಯಿಟ್ಟ ಹಣಕ್ಕೆ ಬಡ್ಡಿ ನೀಡಲು ನಿರಾಕರಿಸಿದ್ದ ಭಾರತೀಯ ಅಂಚೆ ಇಲಾಖೆಯನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತು.

ಉಳಿತಾಯ ಖಾತೆಯ ಠೇವಣಿಗೆ ಬಡ್ಡಿ ಪಾವತಿಸುವುದಿಲ್ಲ ಎಂದು ತಿಳಿಸಿ ಪತ್ರ ಕಳುಹಿಸಿದ ಭಾರತೀಯ ಅಂಚೆ ಇಲಾಖೆಯ ಧೋರಣೆ ಆಕ್ಷೇಪಿಸಿ ಬೆಂಗಳೂರು ನಿವಾಸಿ ಕೆ ಶಂಕರ್ ಲಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಸಕದಸ್ಯ ಪೀಠವು ಪುರಸ್ಕರಿಸಿದೆ.

ಠೇವಣಿ ಖಾತೆ ತೆರೆಯುವಾಗ ಯೋಜನೆ ಅವಧಿ ಮುಕ್ತಾಯವಾಗಿರುವ ಬಗ್ಗೆ ಅಂಚೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ. ಖಾತೆ ತೆರೆದ 12 ವರ್ಷಗಳ ನಂತರ ಪತ್ರ ಬರೆದು, ಬಡ್ಡಿ ನೀಡುವುದಿಲ್ಲ ಎಂಬುದಾಗಿ ತಿಳಿಸಿರುವುದು ನಿಯಮಬಾಹಿರ ಕ್ರಮ ಎಂದು ಆಕ್ಷೇಪಿಸಿದ್ದರು.

ಅರ್ಜಿ ಪುರಸ್ಕರಿಸಿದ ಹೈಕೋರ್ಟ್, ಉಳಿತಾಯ ಯೋಜನೆ ಅವಧಿ ಮುಕ್ತಾಯಗೊಂಡ ಬಳಿಕವೂ ಠೇವಣಿ ಸ್ವೀಕರಿಸಿ ಬಡ್ಡಿ ನೀಡುವುದಿಲ್ಲ ಎನ್ನುವುದು ನ್ಯಾಯಸಮ್ಮತವಲ್ಲ. ಒಂದೊಮ್ಮೆ ಖಾತೆದಾರರು ಅವಧಿ ಮುಗಿದ ನಂತರ ಖಾತೆ ತೆರೆದು, ಠೇವಣಿ ಇಟ್ಟಿದ್ದಾರೆ ಎಂಬುದು ತಿಳಿದು ಬಂದ ಕೂಡಲೇ ಅದನ್ನು ಸರಿಪಡಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕಿತ್ತು. ಇದನ್ನು ಮಾಡದಿರುವುದು ಸಂಬಂಧಪಟ್ಟ ಅಧಿಕಾರಿಯ ಕರ್ತವ್ಯ ಲೋಪವಾಗಲಿದೆ. ಆದ್ದರಿಂದ, ಅರ್ಜಿದಾರರಿಗೆ ಬಡ್ಡಿ ಸಹಿತ ಠೇವಣಿ ಹಣ ಹಿಂದಿರುಗಿಸಬೇಕು ಎಂದು ನಿರ್ದೇಶಿಸಿತು.

ಅಲ್ಲದೆ, ಇಂತಹ ಖಾತೆಗಳನ್ನು ನಿರ್ವಹಿಸುವ ಎಲ್ಲ ಅಂಚೆ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಬೇಕು. ಇದರಿಂದ ಸಾಮಾನ್ಯ ಜನರು ಅನಗತ್ಯ ವ್ಯಾಜ್ಯಗಳಿಗೆ ಹಣ ಖರ್ಚು ಮಾಡುವುದು ಉಳಿಯುತ್ತದೆ ಎಂದು ಆದೇಶದಲ್ಲಿ ಪೀಠ ನಿರ್ದೇಶಿಸಿದೆ.

ಅರ್ಜಿದಾರರು 2009ರಲ್ಲಿ ಭಾರತೀಯ ಅಂಚೆ ಇಲಾಖೆಯಲ್ಲಿ ಎಚ್‌ಯುಎಫ್ ಪಿಪಿಎಫ್ ಖಾತೆ ತೆರೆದು ಒಟ್ಟು 12,96,412 ರೂಪಾಯಿ ಠೇವಣಿ ಇಟ್ಟಿದ್ದರು. ಇದು 2025ಕ್ಕೆ ಮುಕ್ತಾಯವಾಗಿ ಹಣ ಬರಬೇಕಿತ್ತು. ಉಳಿತಾಯ ಖಾತೆ ತೆರೆದ 12 ವರ್ಷದ ನಂತರ ಅಂದರೆ 2021ರ ಸೆಪ್ಟೆಂಬರ್‌ 23ರಂದು ಪೋಸ್ಟ್ ಮಾಸ್ಟರ್ ಪತ್ರ ಕಳುಹಿಸಿ, ‘ನೀವು 2009ರಲ್ಲಿ ಎಚ್‌ಯುಎಫ್ ಪಿಪಿಎಫ್ ಖಾತೆ ತೆಗೆದಿದ್ದೀರಿ. ಆದರೆ, ಆ ಯೋಜನೆ ಅವಧಿ 2005ರ ಮೇ 31ಕ್ಕೆ ಮುಗಿದಿದೆ. ಹೀಗಾಗಿ, ನಿಮಗೆ ಬಡ್ಡಿ ನೀಡಲಾಗದು’ ಎಂದು ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT