ಸಿಆರ್ ಪಿಎಫ್ ಸಾಂದರ್ಭಿಕ ಚಿತ್ರ 
ರಾಜ್ಯ

ಸಿಆರ್ ಪಿಎಫ್ ನೇಮಕಾತಿ: ಕನ್ನಡದಲ್ಲೂ ಪರೀಕ್ಷೆ ಬರೆಯಲು ಕೇಂದ್ರದ ಆದೇಶ, ಇದು ನಮ್ಮ ಹಕ್ಕು ಎಂದ ಜೆಡಿಎಸ್!

ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ ಪಿಎಫ್) ಹುದ್ದೆಗಳ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ದೇಶದ ಪ್ರಮುಖ ಬರೆಯುವಂತೆ ಕೇಂದ್ರ ಗೃಹ  ಸಚಿವಾಲಯ ಆದೇಶ ನೀಡಿದೆ. ಈ ಹಿಂದೆ ಈ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ನಲ್ಲಷ್ಟೇ ಬರೆಯಬೇಕೆಂಬ ಸರ್ಕಾರದ ಆದೇಶಕ್ಕೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಬೆಂಗಳೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ ಪಿಎಫ್) ಹುದ್ದೆಗಳ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ದೇಶದ ಪ್ರಮುಖ ಬರೆಯುವಂತೆ ಕೇಂದ್ರ ಗೃಹ  ಸಚಿವಾಲಯ ಆದೇಶ ನೀಡಿದೆ. ಈ ಹಿಂದೆ ಈ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ನಲ್ಲಷ್ಟೇ ಬರೆಯಬೇಕೆಂಬ ಸರ್ಕಾರದ ಆದೇಶಕ್ಕೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ಕನ್ನಡಿಗರ ಪರವಾದ ಒತ್ತಾಯಕ್ಕೆ ಮಣಿದು ಕೇಂದ್ರ ಗೃಹ ಸಚಿವಾಲಯ ಈ ಆದೇಶ ಹೊರಡಿಸಿದೆ. ಕನ್ನಡ ಸೇರಿದಂತೆ ದೇಶದ ಹಲವು ಭಾಷೆಗಳಿಗೆ ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸವಿದ್ದು, ವಿಶ್ವದಾದ್ಯಂತ ಕೋಟ್ಯಂತರ ಜನರು ಮಾತನಾಡುತ್ತಾರೆ. ಬಿಜೆಪಿಯ ಈ ಆದೇಶ ಅಮಿತ್ ಶಾ ಹೇಳಿದಂತೆ ಐತಿಹಾಸಿಕವಾಗಿ ಬಿಟ್ಟುಕೊಟ್ಟ ಔದಾರ್ಯವಲ್ಲ. ಇದು ನಮ್ಮ ಕನ್ನಡಿಗರ ಹಕ್ಕು ಎಂದಿದೆ.

ನಮ್ಮ ಭಾಷೆಯಲ್ಲಿ ಪರೀಕ್ಷೆ ಬರೆಯುವುದೂ ನಮ್ಮ ಹಕ್ಕು. ಅದನ್ನು ಈವರೆಗೆ ನಮಗೆ ನಿರಾಕರಿಸಲಾಗಿತ್ತು. ಈ ತಪ್ಪನ್ನು ತೀವ್ರ ಪ್ರತಿಭಟನೆಯ ಕಾರಣಕ್ಕೆ ಸರಿಪಡಿಸಲಾಗಿದೆ. ಇದರ ಕ್ರೆಡಿಟ್ ಕನ್ನಡಿಗರು ಮತ್ತು ಭಾಷಾಪ್ರೇಮಿಗಳಿಗೆ ಹೋಗಬೇಕೆ ಹೊರತು, ರಾಜ್ಯ ಬಿಜೆಪಿಯಂತಹ ಹಿಂದಿ ಪ್ರೇಮಿಗಳಿಗೆ ಅಲ್ಲ ಎಂದು ಟೀಕಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT