ಈಶ್ವರಪ್ಪ 
ರಾಜ್ಯ

ನನ್ನ ಹತ್ಯೆಗೆ ಲಷ್ಕರ್‌ ಜೊತೆ ಸೇರಿ ಪಿಎಫ್‌ಐ ಸಂಚು ರೂಪಿಸಿರುವ ವಿಚಾರ ತಿಳಿದು ಆಘಾತವಾಯಿತು: ಈಶ್ವರಪ್ಪ

ನನ್ನ ಹತ್ಯೆಗೆ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಪಿಎಫ್ಐ ಸಂಚು ರೂಪಿಸಿರುವ ವಿಚಾರ ತಿಳಿದು ಆಘಾತವಾಯಿದು ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಬಳ್ಳಾರಿ: ನನ್ನ ಹತ್ಯೆಗೆ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಪಿಎಫ್ಐ ಸಂಚು ರೂಪಿಸಿರುವ ವಿಚಾರ ತಿಳಿದು ಆಘಾತವಾಯಿದು ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಪೊಲೀಸ್ ಅಧಿಕಾರಿಯಿಂದ ಈ ಬಗ್ಗೆ ವಿಚಾರ ತಿಳಿಯಿತು. "ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ನನಗೆ ಕರೆ ಮಾಡಿ ರಕ್ಷಣೆ ನೀಡುವ ಭರವಸೆ ನೀಡಿದ್ದಾರೆ. ಬೆದರಿಕೆ ಹಾಕಿದ್ದ ಎನ್ನಲಾದ ಶಾಹಿರ್ ಶೇಕ್ ಎಂಬಾತನನ್ನು ನಾಗ್ಪುರ ಪೊಲೀಸರು ಬಂಧಿಸಿದ್ದು, ಪ್ರಸ್ತುತ ಆತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾನೆಂದು ಹೇಳಿದರು.

''ನಾನು ನನ್ನ ಅಜೆಂಡಾದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ನಾನು ನನ್ನ ಕೊನೆಯ ಉಸಿರು ಇರುವವರೆಗೂ ಹಿಂದುತ್ವವನ್ನು ಅನುಸರಿಸುತ್ತೇನೆ ಮತ್ತು ರಕ್ಷಿಸುತ್ತೇನೆ, ಅಲ್ಲಿಯವರೆಗೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ, ಬೆದರಿಕೆ ಯಾವಾಗಲೂ ಇದ್ದೇ ಇರುತ್ತದೆ. ನನ್ನ ರಾಜಕೀಯ ಜೀವನದಲ್ಲಿ ನಾನು ಇಂತಹ ಶಕ್ತಿಗಳಿಗೆ ಎಂದಿಗೂ ಹೆದರುವುದಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!