ಸಿಎಂ ಬೊಮ್ಮಾಯಿ 
ರಾಜ್ಯ

5 ವರ್ಷಗಳಲ್ಲಿ ಸಿಎಂ ಬೊಮ್ಮಾಯಿ ಆಸ್ತಿ ಐದು ಪಟ್ಟು ಹೆಚ್ಚಳ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಸ್ತಿಯು ಕಳೆದ ಐದು ವರ್ಷಗಳಲ್ಲಿ ಐದು ಪಟ್ಟು ಹೆಚ್ಚಾಗಿರುವುದಾಗಿ ತಿಳಿದುಬಂದಿದೆ.

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಸ್ತಿಯು ಕಳೆದ ಐದು ವರ್ಷಗಳಲ್ಲಿ ಐದು ಪಟ್ಟು ಹೆಚ್ಚಾಗಿರುವುದಾಗಿ ತಿಳಿದುಬಂದಿದೆ.

ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲು ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಾಮಪತ್ರ ಸಲ್ಲಿಸಿದರು. ಈ ವೇಳೆ ತಮ್ಮ ಆಸ್ತಿ ವಿವರವನ್ನೂ ನೀಡಿದರು.

ಇದರಂತೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಅಂದರೆ, 2018ರಲ್ಲಿ 6.09 ಕೋಟಿಯಷ್ಟಿದ್ದ ಬೊಮ್ಮಾಯಿಯವರ ಆಸ್ತಿ ಇದೀಗ 28.94 ಕೋಟಿಗೆ ಹೆಚ್ಚಾಗಿರುವುದು ಕಂಡು ಬಂದಿದೆ.

ಇದರಂತೆ ಅವರ ಸ್ಥಿರಾಸ್ತಿಗಳ ಮೌಲ್ಯ 3.77 ಕೋಟಿ ರೂ.ಗಳಿಂದ 22.96 ಕೋಟಿ ರೂ.ಗೆ ಏರಿಕೆಯಾಗಿದ್ದು, ಆರು ಪಟ್ಟು ಹೆಚ್ಚಾಗಿದೆ. ಅದೇ ರೀತಿ ಚರಾಸ್ತಿ ಮೌಲ್ಯ 2.32 ಕೋಟಿ ರೂ.ನಿಂದ 5.98 ಕೋಟಿ ರೂ.ಗೆ ಏರಿಕೆಯಾಗಿದೆ.

ಭಾರತೀಯ ಚುನಾವಣಾ ಆಯೋಗದ ಮುಂದೆ ಸಲ್ಲಿಸಿದ ಅಫಿಡವಿಟ್ ಪ್ರಕಾರ, ಬೊಮ್ಮಾಯಿ ಅವರು 28,93,94,208 ರೂಪಾಯಿ ಮೌಲ್ಯದ ಆಸ್ತಿ ಮತ್ತು 5,79,20,753 ರೂಪಾಯಿಗಳ ಸಾಲ ಇರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಹಿಂದೂ ಅವಿಭಜಿತ ಕುಟುಂಬ ಎಂಬ ಕಾಲಂ ಅಡಿಯಲ್ಲಿ ಅವರು 20,77,41,231 ರೂ.ಗಳ ಪಿತ್ರಾರ್ಜಿತ ಆಸ್ತಿಯನ್ನು ಘೋಷಿಸಿದ್ದಾರೆ. ಹಾಗಾಗಿ ಬೊಮ್ಮಾಯಿ ಏನರ ಒಟ್ಟು ಆಸ್ತಿ 49.70 ಕೋಟಿ ರೂ ಗಳಾಗಿದೆ.

ಇದಲ್ಲದೆ ಬೊಮ್ಮಾಯಿಯವರ ಬಳಿಕ 1.5 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಲೆಬಾಳುವ ವಸ್ತುಗಳಿದ್ದು, ಅವರ ಪತ್ನಿ ಚೆನ್ನಮ್ಮ 78.83 ಲಕ್ಷ ರೂಪಾಯಿ ಆಸ್ತಿ ಹೊಂದಿದ್ದಾರೆಂದು ತಿಳಿಸಿದ್ದಾರೆ.

ಯಲಹಂಕ ಮತ್ತು ಹುಬ್ಬಳ್ಳಿಯ ಬೆಂಗೇರಿಯಲ್ಲಿ ಕೃಷಿಯೇತರ ಜಮೀನು, ಹುಬ್ಬಳ್ಳಿ ಹೊರವಲಯದ ತಾರಿಹಾಳ್ ಗ್ರಾಮದಲ್ಲಿ ಕೃಷಿ ಭೂಮಿ ಹಾಗೂ ಕುಂದಗೋಳ ತಾಲೂಕಿನ ಕಮಡೊಳ್ಳಿಯಲ್ಲಿ ಕೃಷಿ ಭೂಮಿ. ಮೂರು ವಾಣಿಜ್ಯ ಮತ್ತು ನಾಲ್ಕು ವಸತಿ ಕಟ್ಟಡಗಳಿರುವುದಾಗಿ ಘೋಷಿಸಿದ್ದಾರೆ.

ತಮ್ಮ ಪುತ್ರ ಭರತ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಹಾವೇರಿ ಸಂಸದ ಶಿವಕುಮಾರ್ ಉದಾಸಿ ಅವರೊಂದಿಗೆ ಶಿಗ್ಗಾಂವಿಗೆ ಆಗಮಿಸಿದ ಬೊಮ್ಮಾಯಿಯವರು, ಶನಿವಾರವನ್ನು ಶುಭದಿನವೆಂದು ಪರಿಗಣಿಸಿ ನಾಮಪತ್ರ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT