ವಿಧಾನಸೌಧ 
ರಾಜ್ಯ

ಕರ್ನಾಟಕ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಿಂದಾಗಿ ಸರ್ಕಾರದ ಕಾಶಿ ಯಾತ್ರೆ ರದ್ದು

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಅಂಗವಾಗಿ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿದ್ದು, ರಾಜ್ಯ ಸರ್ಕಾರವು 'ಭಾರತ್ ಗೌರವ್ ಕಾಶಿ ದರ್ಶನ' ಯೋಜನೆಯಡಿಯಲ್ಲಿ ವಾರಣಾಸಿ ಮತ್ತು ಅಯೋಧ್ಯೆಗೆ ತನ್ನ ಪ್ರಮುಖ ತೀರ್ಥಯಾತ್ರೆ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಅಂಗವಾಗಿ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿದ್ದು, ರಾಜ್ಯ ಸರ್ಕಾರವು 'ಭಾರತ ಗೌರವ ಕಾಶಿ ದರ್ಶನ' ಯೋಜನೆಯಡಿಯಲ್ಲಿ ವಾರಣಾಸಿ ಮತ್ತು ಅಯೋಧ್ಯೆಗೆ ತನ್ನ ಪ್ರಮುಖ ತೀರ್ಥಯಾತ್ರೆ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.

ಏಪ್ರಿಲ್ 14 ಮತ್ತು 28 ರಂದು ಎರಡು ಬ್ಯಾಚ್‌ಗಳಲ್ಲಿ ಯಾತ್ರೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ, ಚುನಾವಣಾ ಆಯೋಗದ ನಿರ್ದೇಶನದ ನಂತರ ಯಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ಕಾರ್ಯಕ್ರಮವನ್ನು ಆಯೋಜಿಸುವ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್ 29 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಬುಕಿಂಗ್ ಅನ್ನು ತಕ್ಷಣವೇ ನಿಲ್ಲಿಸುವಂತೆ ಚುನಾವಣಾ ಆಯೋಗವು ಏಪ್ರಿಲ್ 14 ರಂದು ತನ್ನ ಪತ್ರದಲ್ಲಿ ಸೂಚಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಯಾತ್ರೆ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡದ ಕಾರಣ ಅದನ್ನು ರದ್ದುಗೊಳಿಸಲಾಗಿದೆ ಎಂದು ಈ ಮೂಲಕ ತಿಳಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT