ಶಿಕ್ಷಣ ಇಲಾಖೆ (ಸಂಗ್ರಹ ಚಿತ್ರ) 
ರಾಜ್ಯ

ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯ; ಕರ್ನಾಟಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ

ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಮಹತ್ವದ ಆದೇಶ ನೀಡಿದ್ದು, ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯಗೊಳಿಸಿದೆ.

ಬೆಂಗಳೂರು: ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಮಹತ್ವದ ಆದೇಶ ನೀಡಿದ್ದು, ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯಗೊಳಿಸಿದೆ.

ಹೌದು.. ಹೊಸ ಶೈಕ್ಷಣಿಕ ವರ್ಷ ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಶಾಲೆಗೆ ಸೇರ್ಪಡೆಯಾಗುವವರು ಹಾಗೂ ಮತ್ತೊಂದು ಶಾಲೆಗೆ ಪ್ರವೇಶ ಪಡೆಯುವರ ಪ್ರಕ್ರಿಯೆಯೂ ಆರಂಭವಾಗಿದೆ. ಇದರ ಮಧ್ಯೆ ಖಾಸಗಿ ಶಾಲೆಗಳು ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿವೆ ಎಂಬ ಆರೋಪವೂ ಕೇಳಿ ಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯ ಗೊಳಿಸಿ ಸುತ್ತೋಲೆ ಹೊರಡಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ವಿವರಗಳನ್ನು ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಸೂಚಿಸಿದೆ. ಅಲ್ಲದೆ ಏಪ್ರಿಲ್ ನಿಂದ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು ಎಂದು ತಿಳಿಸಲಾಗಿದ್ದು, ಜೊತೆಗೆ ಮಗು ಹಿಂದೆ ಓದುತ್ತಿದ್ದ ಶಾಲೆ ತೊರೆದು ಬೇರೆ ಶಾಲೆಗೆ ಪ್ರವೇಶ ಪಡೆದ ಸಂದರ್ಭದಲ್ಲಿ ತಕ್ಷಣವೇ ವರ್ಗಾವಣೆ ಪತ್ರ ನೀಡಬೇಕು ಎಂದು ತಿಳಿಸಲಾಗಿದೆ.

ಡೊನೇಷನ್ ಕೇಳುವಂತಿಲ್ಲ.. ಪೋಷಕರಿಗೆ ಪ್ರವೇಶ ಪರೀಕ್ಷೆಯೂ ಇಲ್ಲ!!
ಅಂತೆಯೇ ಸಿಬಿಎಸ್‌ಸಿ, ಐ ಸಿ ಎಸ್ ಸಿ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಡೊನೇಷನ್ ಪಡೆಯಬಾರದು ಎಂದು ತಿಳಿಸಲಾಗಿದೆ. ಅಂತೆಯೇ ಮಗುವಿನ ಪ್ರವೇಶಕ್ಕೆ ಪೋಷಕರಿಗೆ ಪ್ರವೇಶ ಪರೀಕ್ಷೆ ನಡೆಸಬಾರದೆಂದು ಸೂಚಿಸಲಾಗಿದ್ದು, ನಿಯಮಗಳನ್ನು ಉಲ್ಲಂಘಿಸಿದ ಶಾಲೆಗಳಿಗೆ ಒಂದು ಲಕ್ಷ ರೂಪಾಯಿ ದಂಡ, ಇದು ಪುನರಾವರ್ತನೆ ಆದರೆ ದಿನಕ್ಕೆ 10 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT