ತೇಜಸ್ವಿನಿ ಅನಂತ್ ಕುಮಾರ್ 
ರಾಜ್ಯ

ಒಂದು ಗಿಡ-ನೂರೊಂದು ಅರ್ಥ: ಚರ್ಚೆಗೆ ಕಾರಣವಾಯ್ತು ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾಡಿರುವ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದೆ. ತಮ್ಮ ಪತಿ ಅನಂತಕುಮಾರ್‌ ಅವರು ಲಾಲ್‌ಬಾಗ್‌ನಲ್ಲಿ ನೆಟ್ಟ ಗಿಡ ಬಾಡಿ ಹೋಗಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾಡಿರುವ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದೆ. ತಮ್ಮ ಪತಿ ಅನಂತಕುಮಾರ್‌ ಅವರು ಲಾಲ್‌ಬಾಗ್‌ನಲ್ಲಿ ನೆಟ್ಟ ಗಿಡ ಬಾಡಿ ಹೋಗಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.

2015ರ ಜೂನ್‌ 5ರಂದು ಲಾಲ್‌ಬಾಗ್‌ ಪಶ್ಚಿಮ ದ್ವಾರದ ಬಳಿ ಅನಂತಕುಮಾರ್‌ ಅವರು ಈ ಗಿಡ ನೆಟ್ಟಿದ್ದರು. ಯಾಕೋ ಮುದುರಿ ಹೋಗಿದೆ. ಲಾಲ್‌ಬಾಗ್‌ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಅನಂತಕುಮಾರ ಅವರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು ಎಂಬುದು ನನ್ನ ಭಾವನೆ’ ಎಂದಿದ್ದಾರೆ.

ತೇಜಸ್ವಿನಿ ಅವರು ವಿಧಾನಸಭಾ ಚುನಾವಣೆ ಟಿಕೆಟ್‌ ಆಕಾಂಕ್ಷಿಯಾಗಿದ್ದರು ಆದರೆ, ಅವರಿಗೆ ಟಿಕೆಟ್‌ ತಪ್ಪಿರುವುದರಿಂದ ತಮ್ಮ ವೇದನೆಯನ್ನು ಸೂಚ್ಯವಾಗಿ ಈ ರೀತಿ ವ್ಯಕ್ತಪಡಿಸಿರಬಹುದು ಎಂಬ ಚರ್ಚೆ ನಡೆಯುತ್ತಿದೆ. ಈ ಟ್ವೀಟ್‌ ಮಾಡುವುದಕ್ಕೂ ಮುನ್ನ ಅವರು, 'ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?' ಎಂದು ಟ್ವೀಟ್‌ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT