ಬೆಂಗಳೂರು: ರೈಲಿನಲ್ಲಿ ಗಾಂಜಾ ತಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಡ್ರಗ್ಸ್ ಪೆಡ್ಲರ್ ಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಹಲವು ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರಂಭದಲ್ಲಿ ಪೊಲೀಸರು ಮಂಜುನಾಥ್ ಎಂಬಾತನನ್ನು ಬಂಧನಕ್ಕೊಳಪಡಿಸಿದ್ದರು. ನಂತರ ಆತನನ್ನು ವಿಚಾರಣೆಗೊಳಪಡಿಸಿದ ಬಳಿಕ ಆತ ನೀಡಿದ ಮಾಹಿತಿ ಮೇರೆಗೆ ಮತ್ತೆ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ; ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 20 ವರ್ಷ ಜೈಲು ಶಿಕ್ಷೆ
ಬಂಧಿತರನ್ನು ಹೊಸಕೋಟೆ ಮೂಲದ ಮುನಿಯಪ್ಪ, ಒಡಿಶಾ ಮೂಲದ ನಿರಂಜನ್ ಪ್ರಧಾನ್ ಮತ್ತು ಫಕೀರ್ ದಳಪತಿ ಎಂದು ಗುರುತಿಸಲಾಗಿದೆ.
ಪ್ರಧಾನ್ ಮತ್ತು ದಳಪತಿ ಗಾಂಜಾವನ್ನು ರೈಲುಗಳ ಮೂಲಕ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ತನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.