ರಾಜ್ಯ

ಪ್ರವಾಸಿಗರೇ ಗಮನಿಸಿ: ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ, ಹೊಸ ವೇಳಾಪಟ್ಟಿ ಇಂತಿದೆ!

Srinivasamurthy VN

ಬೆಂಗಳೂರು: ಕರ್ನಾಟಕದ ಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ವೇಳಾಪಟ್ಟಿ ಪರಿಷ್ಕರಣೆ ಮಾಡಿ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್ ಮಾಹಿತಿ ನೀಡಿದ್ದಾರೆ.

ಬೇಸಿಗೆ ಹಿನ್ನಲೆಯಲ್ಲಿ ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಬೇಸಿಗೆ ರಜೆ ಹಿನ್ನೆಲೆಯಲ್ಲಿ ಪ್ರಸಿದ್ಧ ನಂದಿಗಿರಿಧಾಮದ ಪ್ರವೇಶದ ಅವಧಿಯನ್ನು ಪರಿಷ್ಕರಿಸಲಾಗಿದೆ. ಬೆಳಿಗ್ಗೆ 5ರಿಂದ ಸಂಜೆ 7ರವರೆಗೆ ಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್ ತಿಳಿಸಿದ್ದಾರೆ. 

ಈ ಹಿಂದೆ ಬೆಳಿಗ್ಗೆ 5.30 ರಿಂದ ಸಂಜೆ 6ರವರೆಗೆ ಪ್ರವೇಶಕ್ಕೆ ಅವಕಾಶವಿತ್ತು. ಬೇಸಿಗೆ ರಜೆ ಪ್ರಾರಂಭವಾಗುತ್ತಿದೆ. ಸೂರ್ಯೋದಯ ಮತ್ತು ಸೂರ್ಯಾಸ್ತ ವೀಕ್ಷಣೆಗಾಗಿ ಪ್ರವಾಸಿಗರಿಗೆ ಹೆಚ್ಚಿನ ಕಾಲಾವಕಾಶ ಒದಗಿಸುವ ನಿಟ್ಟಿನಲ್ಲಿ ಮತ್ತು ನಂದಿಗಿರಿಧಾಮ ಸಮಗ್ರ ಅಭಿವೃದ್ಧಿ ಮತ್ತು ನಿರ್ವಹಣಾಸಮಿತಿ ಅಧ್ಯಕ್ಷರ ಆದೇಶದ ಮೇರೆಗೆ ಸಮಯ ವಿಸ್ತರಿಸಲಾಗಿದೆ ಎಂದರು. ಈ ವಿಸ್ತರಣೆ ಸೆಪ್ಟೆಂಬರ್ 30ರವರೆಗೆ ಅನ್ವಯ ಆಗಲಿದೆ ಎಂದು ಅವರು ತಿಳಿಸಿದ್ದಾರೆ.
 

SCROLL FOR NEXT