ಸಾಂದರ್ಭಿಕ ಚಿತ್ರ 
ರಾಜ್ಯ

ಬುಡಕಟ್ಟು ಜನಾಂಗದ ವ್ಯಕ್ತಿ ಶವ ಪತ್ತೆ; ನಾಗರಹೊಳೆ ಅರಣ್ಯ ಸಿಬ್ಬಂದಿ ಮೇಲೆ ಸಂಬಂಧಿಕರ ಅನುಮಾನ

ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಅರಣ್ಯ ಸಿಬ್ಬಂದಿಯ ಚಿತ್ರಹಿಂಸೆಯಿಂದ 49 ವರ್ಷದ ಆದಿವಾಸಿ ವ್ಯಕ್ತಿ ಕಸ್ಟಡಿಯಲ್ಲಿ ಮೃತಪಟ್ಟಿದ್ದ ಘಟನೆ ಇನ್ನೂ ಮಾಸದಿರುವಾಗಲೇ, 30 ವರ್ಷದ ಯುವಕನ ಸಾವಿನ ಮತ್ತೊಂದು ಘಟನೆ ಆದಿವಾಸಿ ಜನಾಂಗ ಮತ್ತು ಮೃತರ ಕುಟುಂಬ ಸದಸ್ಯರನ್ನು ಕೆರಳಿಸಿದೆ. 

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಅರಣ್ಯ ಸಿಬ್ಬಂದಿಯ ಚಿತ್ರಹಿಂಸೆಯಿಂದ 49 ವರ್ಷದ ಆದಿವಾಸಿ ವ್ಯಕ್ತಿ ಕಸ್ಟಡಿಯಲ್ಲಿ ಮೃತಪಟ್ಟಿದ್ದ ಘಟನೆ ಇನ್ನೂ ಮಾಸದಿರುವಾಗಲೇ, 30 ವರ್ಷದ ಯುವಕನ ಸಾವಿನ ಮತ್ತೊಂದು ಘಟನೆ ಆದಿವಾಸಿ ಜನಾಂಗ ಮತ್ತು ಮೃತರ ಕುಟುಂಬ ಸದಸ್ಯರನ್ನು ಕೆರಳಿಸಿದೆ. 

ಜೇನು ಕುರುಬ ಜನಾಂಗಕ್ಕೆ ಸೇರಿದ ಹೊಸಹಳ್ಳಿ ಬುಡಕಟ್ಟು ಗ್ರಾಮದ ನಿವಾಸಿ ಮಾಸ್ತಿ ಮಂಗಳವಾರ ಮೀನುಗಾರಿಕೆಗೆ ತೆರಳಿದ್ದರು. ಆದರೆ, ಬಳ್ಳೆ ಹಾಡಿಯ ಬಳಿ ಶವವಾಗಿ ಪತ್ತೆಯಾಗಿರುವ ಬಗ್ಗೆ ಕುಟುಂಬದವರಿಗೆ ಮಾಹಿತಿ ಲಭಿಸಿದೆ. ಹೂಳು ಮರಳಿನಲ್ಲಿ ಸಿಕ್ಕಿ ಬಿದ್ದಿರುವುದೇ ಯುವಕನ ಸಾವಿಗೆ ಕಾರಣ ಎನ್ನಲಾಗಿದೆ.

ಆದರೆ, ಕು1ಟುಂಬಸ್ಥರು ಇದು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವಂತೆ ಕಾಣುತ್ತಿಲ್ಲ. ಈ ಸಾವಿನ ಹಿಂದೆ ಆಗಾಗ ಕಿರುಕುಳ ನೀಡುತ್ತಿದ್ದ ಕೆಲ ಅರಣ್ಯ ಸಿಬ್ಬಂದಿಯ ಕೈವಾಡವಿದೆ ಎಂದು ದೂರಿದರು.

ಅರಣ್ಯ ಇಲಾಖೆಯ ಸಿಬ್ಬಂದಿ ಮಹೇಶ್ ಮೀನುಗಾರಿಕೆಗೆ ತೆರಳುವ ಆದಿವಾಸಿಗಳಿಗೆ ಕಿರುಕುಳ ನೀಡುತ್ತಿದ್ದು, ಈ ಹಿಂದೆ ಅವರ ನಡುವೆ ತೀವ್ರ ವಾಗ್ವಾದ ನಡೆದಿತ್ತು ಎನ್ನಲಾಗಿದೆ.

ಮಂಗಳವಾರ, ಮಾಸ್ತಿ ಮೀನುಗಾರಿಕೆಗೆ ತೆರಳಿದ್ದಾಗ, ಅರಣ್ಯ ಸಿಬ್ಬಂದಿ ಆತನನ್ನು ಹಿಡಿದು ಪ್ರಕರಣ ದಾಖಲಿಸಲು ಬೆನ್ನಟ್ಟಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ. 

'ಭಯದಿಂದ ಓಡಿಹೋದ ಮಾಸ್ತಿ ನಂತರ ಸಿಕ್ಕಿದ್ದಾನೆ. ಈ ವೇಳೆ ಆತನನ್ನು ಥಳಿಸಿರಬಹುದು ಮತ್ತು ನಂತರ ಆತನು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ ಎಂದು ತೋರಿಸಿರಬುಹುದು' ಎಂದು ಮೃತರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಈಮಧ್ಯೆ, ಅಂತರಸಂತೆ ಪೊಲೀಸರು ಘಟನೆಯನ್ನು ಅಸಹಜ ಸಾವು ಎಂದು ಖಚಿತಪಡಿಸಿದ್ದು, ಹೆಚ್ಚಿನ ವಿವರಗಳನ್ನು ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT