ಸಂಗ್ರಹ ಚಿತ್ರ 
ರಾಜ್ಯ

ಹೊಟ್ಟೆಯಲ್ಲಿ ಮೃತಪಟ್ಟಿದ್ದ ಮರಿ ಹೊರತೆಗೆದು ಆನೆ ರಕ್ಷಿಸಿದ ಪಶುವೈದ್ಯರು!

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸುವರ್ಣ ಎಂಬ ಆನೆ ಹೊಟ್ಟೆಯಲ್ಲಿ ಮೃತಪಟ್ಟಿದ್ದ ಮರಿಯನ್ನು ಹೊರತೆಗೆಯುವಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆರೋಗ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸುವರ್ಣ ಎಂಬ ಆನೆ ಹೊಟ್ಟೆಯಲ್ಲಿ ಮೃತಪಟ್ಟಿದ್ದ ಮರಿಯನ್ನು ಹೊರತೆಗೆಯುವಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆರೋಗ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಬನ್ನೇರ್ಘಟ್ಟ ಉದ್ಯಾನವನದಲ್ಲಿ ಸುವರ್ಣ ಎಂಬ ಹೆಸರಿನ 50 ವರ್ಷದ ಕಾಡಾನೆ ಹೊಟ್ಟೆಯಲ್ಲಿ ಮರಿ ಮೃತಪಟ್ಟಿದ್ದು ಸುಮಾರು ಮೂರು ದಿನಗಳಿಂದ ಹೆರಿಗೆ ನೋವಿನಿಂದ ಕಷ್ಟ ಪಡುತ್ತಿತ್ತು.

ಈ ಆನೆ ಈವರೆಗೂ 9 ಮರಿಗಳಿಗೆ ಜನ್ಮ ನೀಡಿದ್ದು, ದುರಾದೃಷ್ಟವಶಾತ್ 10ನೇ ಮರಿ ಹೊಟ್ಟೆಯಲ್ಲಿಯೇ ಮೃತಪಟ್ಟಿದೆ. ಆನೆಗೆ ಪಶುವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದು, ಮೃತಪಟ್ಟಿದ್ದ ಮರಿ ಆನೆಯನ್ನು ಹೊರೆತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಆನೆಗೆ ಶಸ್ತ್ರಚಿಕಿತ್ಸೆ ಮಾಡಲೇಬೇಕಾಗಿತ್ತು, ಇಲ್ಲದಿದ್ದರೆ ಸುವರ್ಣಾ ಒಂದು ಅಥವಾ ಎರಡು ದಿನಗಳಲ್ಲಿ ಸಾಯುತ್ತಿದ್ದಳು. ಭಾರತದ ಯಾವುದೇ ಮೃಗಾಲಯ ಅಥವಾ ಆನೆ ರಕ್ಷಣಾ ಕೇಂದ್ರದಲ್ಲಿ ಇಂತಹ ಶಸ್ತ್ರಚಿಕಿತ್ಸೆ ನಡೆಸಿಲ್ಲ. ಇದೇ ಮೊದಲ ಬಾರಿಗೆ ಈ ರೀತಿಯ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿದೆ. ಸಾಮಾನ್ಯವಾಗಿ, ಭ್ರೂಣವು ಸತ್ತಾಗ, ಗರ್ಭಾಶಯವು ಕೊಳೆಯಲು ಪ್ರಾರಂಭಿಸುತ್ತದೆ. ಇದರಿಂದ ತಾಯಿ ಆನೆ ಕೂಡ ಸಾವನ್ನಪ್ಪುತ್ತದೆ. ಇದೀಗ ಮೃತಪಟ್ಟಿರುವ ಮರಿ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಪರೀಕ್ಷೆ ಬಳಿಕ ನಿಖರ ಕಾರಣಗಳು ತಿಳಿದು ಬರಲಿದೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಆನೆ ಆರೋಗ್ಯವಾಗಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನ (ಬಿಬಿಪಿ)ದ ಪಶುವೈದ್ಯ ಉಮಾಶಂಕರ್ ಅವರು ಹೇಳಿದ್ದಾರೆ.

ಆನೆಯನ್ನು ಹಿಂಡಿನಿಂದ ಪ್ರತ್ಯೇಕವಾಗಿ ಇರಿಸಲಾಗಿದ್ದು, ನಿಗಾ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT