ಎ. ರವೀಂದ್ರಪ್ಪ 
ರಾಜ್ಯ

ಚಿತ್ರದುರ್ಗ: ಎಚ್.ಡಿ ರೇವಣ್ಣ ಆಪ್ತ, ಹಿರಿಯೂರು ಜೆಡಿಎಸ್ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ

ಕಾವೇರಿದ ಚುನಾವಣೆಯ ವಾತಾವರಣದಲ್ಲಿ ಇರುವ ಜೆಡಿಎಸ್ ಅಭ್ಯರ್ಥಿಯೊಬ್ಬರಿಗೆ ಆದಾಯ ತೆರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಐಟಿ ಅಧಿಕಾರಿಗಳ ತಂಡ ಅಭ್ಯರ್ಥಿಯ ಮನೆ ಮೇಲೆ ದಾಳಿ ಮಾಡಿದ್ದಾರೆ.

ಚಿತ್ರದುರ್ಗ: ಕಾವೇರಿದ ಚುನಾವಣೆಯ ವಾತಾವರಣದಲ್ಲಿ ಇರುವ ಜೆಡಿಎಸ್ ಅಭ್ಯರ್ಥಿಯೊಬ್ಬರಿಗೆ ಆದಾಯ ತೆರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಐಟಿ ಅಧಿಕಾರಿಗಳ ತಂಡ ಅಭ್ಯರ್ಥಿಯ ಮನೆ ಮೇಲೆ ದಾಳಿ ಮಾಡಿದ್ದಾರೆ.

ಹಿರಿಯೂರು ಜೆಡಿಎಸ್​​ ಅಭ್ಯರ್ಥಿ ಗೊಲ್ಲಹಳ್ಳಿ ಗ್ರಾಮದ ರವೀಂದ್ರಪ್ಪ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಡರಾತ್ರಿ ರವಿಂದ್ರಪ್ಪ ಸಂಬಂಧಿ ನಾಗರಾಜ್ ನಿವಾಸದ ಮೇಲೂ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ತಡರಾತ್ರಿ 2 ಗಂಟೆವರೆಗೂ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಧರ್ಮಪುರ ಹೋಬಳಿಯ ಮುಂಗುಸುವಳ್ಳಿ ಗ್ರಾಮದ ತೋಟದ ಮನೆಗೆ ಮಧ್ಯಾಹ್ನ 1.30ಕ್ಕೆ 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಭೇಟಿ ನೀಡಿತು. ರವೀಂದ್ರಪ್ಪ ಅವರು ಚುನಾವಣಾ ಪ್ರಚಾರಕ್ಕೆ ತೆರಳಿದ್ದರಿಂದ ಕಾಯುತ್ತ ಕುಳಿತರು. ಸಂಜೆ 4.30ಕ್ಕೆ ಅಭ್ಯರ್ಥಿ ಮನೆಗೆ ಧಾವಿಸಿದ ಬಳಿಕ ಶೋಧ ಕಾರ್ಯ ಆರಂಭವಾಗಿದೆ.

ದಾವಣಗೆರೆ, ಬೆಂಗಳೂರು ಹಾಗೂ ಮೈಸೂರಿನ ಅಧಿಕಾರಿಗಳು ತಂಡದಲ್ಲಿದ್ದಾರೆ. ತೋಟದ ಮನೆಯ ಕೆಲಸಗಾರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ರವೀಂದ್ರಪ್ಪ ಹಾಗೂ ಕುಟುಂಬದ ಸದಸ್ಯರಿಗೆ ಮನೆಯಲ್ಲಿ ದಿಗ್ಬಂಧನ ಹೇರಲಾಗಿದೆ. ಎರೆಹುಳು ಗೊಬ್ಬರದ ಶೇಡ್‌, ಮೇಕೆ ಫಾರ್ಮ್‌ ಸೇರಿ ಎಲ್ಲೆಡೆ ಶೋಧ ನಡೆಸಿತು.

ಸರ್ಕಾರಿ ಸಂಸ್ಥೆಯಲ್ಲಿ ಮುಖ್ಯ ಇಂಜಿನಿಯರ್ ಆಗಿದ್ದ ರವೀಂದ್ರಪ್ಪ, ನಿವೃತ್ತಿ ಬಳಿಕ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ನಂಜಾವಧೂತ ಶ್ರೀಗಳಿಗೆ ಜನ್ಮದಿನದ ಶುಭಾಶಯ ಕೋರಲು ರವೀಂದ್ರಪ್ಪ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಮಠಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT