ಬಿಎಲ್.ಸಂತೋಷ್ 
ರಾಜ್ಯ

ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ: ಶೆಟ್ಟರ್ ಆರೋಪಕ್ಕೆ ಬಿ.ಎಲ್.ಸಂತೋಷ್

ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಜಗದೀಶ್ ಶೆಟ್ಟರ್ ಆರೋಪ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರು: ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಜಗದೀಶ್ ಶೆಟ್ಟರ್ ಆರೋಪ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿಯಲ್ಲಿ ಹಲವು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿಯಾಗಲು ಬಯಸುವುದಿಲ್ಲ. ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ. ಅವರೆ ಮಾತಾಡಲಿ. ನಾನು ಮಾತಾಡಿ ಯಾರಿಗೆ ಯಾಕೆ ಪ್ರತಿಸ್ಪರ್ಧಿಯಾಗಲಿ ಎಂದು ವ್ಯಂಗ್ಯವಾಡಿದರು.

ಈ ಹಿಂದೆ ಹೇಳಿಕೆ ನೀಡಿದ್ದ ಜಗದೀಶ್ ಶೆಟ್ಟರ್ ಅವರು, ತಮಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣ ಎಂದು ನೇರ ಆರೋಪ ಮಾಡಿದ್ದರು. ಅಲ್ಲದೇ, ಈವರೆಗೂ ಅನೇಕ ನಾಯಕರಿಗೆ ಬಿ.ಎಲ್ ಸಂತೋಷ್ ಬಿಜೆಪಿಯಲ್ಲಿ ಟಿಕೆಟ್ ತಪ್ಪಿಸಿ, ತಮಗೆ ಬೇಕಾದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT