ಸಂಗ್ರಹ ಚಿತ್ರ 
ರಾಜ್ಯ

ಕಲಬುರಗಿಯಲ್ಲಿ ಬಿಜೆಪಿ ಪರ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಪ್ರಚಾರ

ಮುಂದಿನ ದಿನಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಶುಕ್ರವಾರ ಹೇಳಿದರು.

ಕಲಬುರಗಿ: ಮುಂದಿನ ದಿನಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಶುಕ್ರವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳ ವಿಧಾನಸಭಾ ಚುನಾವಣಾ ಉಸ್ತುವಾರಿ ರವಿಕುಮಾರ್ ಅವರು, ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮ ಕುರಿತು 2-3 ದಿನಗಳಲ್ಲಿ ಮಾಹಿತಿ ನೀಡಲಾಗುವುದು. ಕಲಬುರಗಿ ಜಿಲ್ಲೆಯಲ್ಲಿ ಪ್ರಧಾನಿ ಮೋದಿಯವರ ಚುನಾವಣಾ ಪ್ರಚಾರದ ಸ್ಥಳ ಇನ್ನೂ ನಿಗದಿಪಡಿಸಲಾಗಿಲ್ಲ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಳಂದ ಹಾಗೂ ಕಲಬುರಗಿ-ಉತ್ತರ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೇವರ್ಗಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಧಾನಿ ಮೋದಿ ಅವರು ಏಪ್ರಿಲ್ 27 ರಂದು ಬೆಳಗ್ಗೆ 11 ಗಂಟೆಗೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆ ದಿನ ಮತ್ತು ಸಮಯದಲ್ಲಿ ಕರ್ನಾಟಕದ ಎಲ್ಲಾ ಮತಗಟ್ಟೆಗಳ ಬಳಿ ಅವರ ಭಾಷಣವನ್ನು ದೊಡ್ಡ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ನಂತರ ಕಲಬುರಗಿಯಲ್ಲಿ ಆಯಾ ಮತಗಟ್ಟೆಗಳ ಬಿಜೆಪಿ ಕಚೇರಿಯಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದ್ದು, ಎಲ್ಲಾ ಮತದಾರರನ್ನು ಭೇಟಿ ಮಾಡಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಚಲಾಯಿಸುವಂತೆ ಮನವರಿಕೆ ಮಾಡಿಕೊಡುವ ವಿಧಾನದ ಕುರಿತು ತರಬೇತಿ ನೀಡಲಾಗುವುದು ಎಂದು ಹೇಳಿದರು.

ಏಪ್ರಿಲ್ 30 ರಂದು ಎಲ್ಲಾ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರು ತಮ್ಮ ತಮ್ಮ ಬೂತ್‌ಗಳ ಎಲ್ಲಾ ಮನೆಗಳಿಗೆ ಭೇಟಿ ನೀಡಿ, ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸುವಂತೆ ಮತದಾರರನ್ನು ಒತ್ತಾಯಿಸುವ ಕರಪತ್ರಗಳನ್ನು ಹಂಚಲಿದ್ದಾರೆಂದು ತಿಳಿಸಿದರು.

ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಹಾಗೂ ಚುನಾವಣಾ ಪ್ರಚಾರಕ್ಕೆ ಅಭ್ಯರ್ಥಿಗಳಿಗೆ ಅವಕಾಶ ನೀಡುವುದಿಲ್ಲ ಎಂಬ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆ ಕುರಿತು ಮಾತನಾಡಿ, ಚಿತ್ತಾಪುರ ಕ್ಷೇತ್ರದ ವಿವಿಧೆಡೆ ಚುನಾವಣಾ ಪ್ರಚಾರದ ದಿನಾಂಕ ಮತ್ತು ಸಮಯವನ್ನು ಪಕ್ಷ ಪ್ರಕಟಿಸಲಿದೆ. ಅವರಿಗೆ ಧೈರ್ಯವಿದ್ದರೆ ಪ್ರಚಾರ ನಿಲ್ಲಿಸುವ ಪ್ರಯತ್ನ ಮಾಡಲಿ ಎಂದು ಸವಾಲು ಹಾಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಳೆ ವಿಶಿಷ್ಠ ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ; ಈ ಬಗ್ಗೆ ಸ್ವತಃ ಸಿಎಂ ಹೇಳಿದ್ದೇನು?

ಬೀದರ್: ಅರಣ್ಯ ಭೂಮಿ ಒತ್ತುವರಿ ಆರೋಪ; KDP ಸಭೆಯಲ್ಲಿ ಕೈ ಕೈ ಮಿಲಾಯಿಸಿದ BJP ಶಾಸಕ, Congress MLC, Video Viral!

ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವ ಸೋಮಣ್ಣರತ್ತ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು!

ಒಮನ್‌ನಲ್ಲಿ ಟ್ರೆಕ್ಕಿಂಗ್ ದುರಂತ: ಮಲಯಾಳಂ ಹಿನ್ನೆಲೆ ಗಾಯಕಿ 'ಚಿತ್ರಾ ಅಯ್ಯರ್' ಸಹೋದರಿ ಸಾವು!

ನನಗಿರುವ ಮಾಹಿತಿ ಪ್ರಕಾರ ನಾಯಕತ್ವ ಬದಲಾವಣೆ ಇಲ್ಲ: ಸಚಿವ ಕೃಷ್ಣಬೈರೇಗೌಡ ಸ್ಫೋಟಕ ಹೇಳಿಕೆ

SCROLL FOR NEXT