ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ರೌಡಿ ಶೀಟರ್‌ಗಳ ನಿವಾಸದ ಮೇಲೆ ದಾಳಿ ಮುಂದುವರಿಕೆ

ಸಿಲಿಕಾನ್ ಸಿಟಿಯ ಆಗ್ನೇಯ ವಿಭಾಗದಲ್ಲಿ ರೌಡಿ ಶೀಟರ್‌ಗಳು ಮತ್ತು ಸಮಾಜಘಾತುಕರ ನಿವಾಸಗಳ ಮೇಲೆ ದಾಳಿ ಮುಂದುವರಿದಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯ ಆಗ್ನೇಯ ವಿಭಾಗದಲ್ಲಿ ರೌಡಿ ಶೀಟರ್‌ಗಳು ಮತ್ತು ಸಮಾಜಘಾತುಕರ ನಿವಾಸಗಳ ಮೇಲೆ ದಾಳಿ ಮುಂದುವರಿದಿದೆ.

ಮೇ ತಿಂಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗುತ್ತಿದೆ. ಗುರುವಾರ ಉತ್ತರ, ದಕ್ಷಿಣ ಮತ್ತು ಪಶ್ಚಿಮ ವಿಭಾಗಗಳಲ್ಲಿ ದಾಳಿ ನಡೆಸಲಾಗಿತ್ತು. ಶುಕ್ರವಾರ ಎಚ್‌ಎಸ್‌ಆರ್‌ ಲೇಔಟ್‌, ತಿಲಕ್‌ನಗರ, ಪರಪ್ಪನ ಅಗ್ರಹಾರ, ಕೋರಮಂಗಲ ಮತ್ತಿತರ ಪ್ರದೇಶಗಳಲ್ಲಿನ 100ಕ್ಕೂ ಹೆಚ್ಚು ಕ್ರಿಮಿನಲ್‌ಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. 

ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ 1500 ಜನರ ವಿರುದ್ಧ ವಾರೆಂಟ್ ಜಾರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ. 

ಆಗ್ನೇಯ ವಿಭಾಗದಲ್ಲಿ ಸಿಕೆ ಬಾಬಾ, ಉಪ ಪೊಲೀಸ್ ಆಯುಕ್ತ (ಆಗ್ನೇಯ) ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ವಾರೆಂಟ್‌ಗಳನ್ನು ಹೊರಡಿಸಿದ ಕೆಲವು ಅಪರಾಧಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ಮನೆಗಳಲ್ಲಿ ಮಾರಕಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

SCROLL FOR NEXT