ಬೇರ್ಪಟ್ಟ ತೂತುಕುಡಿ ಎಕ್ಸ್‌ಪ್ರೆಸ್‌ ರೈಲು ಬೋಗಿಗಳು! 
ರಾಜ್ಯ

ರಾಮನಗರ: ಚಲಿಸುವಾಗಲೇ ತೂತುಕುಡಿ ಎಕ್ಸ್‌ಪ್ರೆಸ್‌ ರೈಲು ಬೋಗಿಗಳು ಬೇರ್ಪಟ್ಟು ಅವಘಡ!

ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟೆ ಆತಂಕಕಾರಿ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರ: ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟೆ ಆತಂಕಕಾರಿ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರದ ರೈಲು ನಿಲ್ದಾಣದಲ್ಲಿ ಭಾನುವಾರ ರಾತ್ರಿ ಚಲಿಸುತ್ತಿದ್ದ ರೈಲೊಂದರ ಬೋಗಿಗಳು ಬೇರ್ಪಟಿದ್ದು, ಈ ವೇಳೆ ರೈಲಿನಿಂದ ಪ್ರಯಾಣಿಕರು ಆತಂಕಕ್ಕೆ ಒಳಗಾದರು. ಮೈಸೂರಿನಿಂದ ಬೆಂಗಳೂರು ಕಡೆಗೆ ಹೊರಟಿದ್ದ ತೂತುಕುಡಿ ಎಕ್ಸ್‌ಪ್ರೆಸ್‌ ರಾತ್ರಿ 8ರ ವೇಳೆಗೆ ರಾಮನಗರ ನಿಲ್ದಾಣ ತಲುಪಿದ್ದು, ಅಲ್ಲಿಂದ ಮತ್ತೆ ಪ್ರಯಾಣ ಮುಂದುವರಿಸುತ್ತಲೇ ಶಬ್ದ ಕಾಣಿಸಿಕೊಂಡಿತು. ನೋಡುನೋಡುತ್ತಲೇ ರೈಲಿನ ಮಧ್ಯಭಾಗದ ಬೋಗಿಗಳು ಬೇರ್ಪಟ್ಟಿವೆ. 

ಇದರಿಂದ ರೈಲಿನಲ್ಲಿ ಇದ್ದ ಪ್ರಯಾಣಿಕರು ಬೆಚ್ಚಿ ಬಿದ್ದರು. ನಂತರ ರೈಲು ಅಲ್ಲಿಯೇ ನಿಂತಿತು. ಘಟನೆಯಲ್ಲಿ ಅದೃಷ್ಟವಶಾತ್‌ ಯಾರಿಗೂ ಗಾಯವಾಗಿಲ್ಲ.

ಈ ಬಗ್ಗೆ ಮಾಹಿತಿ ನೀಡಿರುವ ಪ್ರಯಾಣಿಕರೊಬ್ಬರು, 'ರೈಲು ರಾಮನಗರ ನಿಲ್ದಾಣ ಬಿಟ್ಟು ಹೊರಟಿತ್ತು. ಆ ವೇಳೆ ಏಕಾಏಕಿ ಶಬ್ದ ಬಂತು. ನೋಡಿದರೆ ನಾವಿದ್ದ ಬೋಗಿಯು ಮುಂದೆ ಇದ್ದ ಬೋಗಿಯಿಂದ ಬೇರ್ಪಟ್ಟಿದ್ದು, ಹಳಿ ಮೇಲೆ ಹಾಗೆಯೇ ನಿಂತುಕೊಂಡಿತ್ತು. ಇದರಿಂದ ಗಾಬರಿಗೊಂಡೆವು. ಆದಾಗ್ಯೂ ರೈಲ್ವೆ ಸಿಬ್ಬಂದಿ ನೆರವಿಗೆ ಬರಲಿಲ್ಲ’ ಎಂದು ಹೇಳಿದ್ದಾರೆ.

ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯ ರೈಲ್ವೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಘಟನೆ ವಿಚಾರವಾಗಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಘಟನೆ ಬಳಿಕ ತೂತುಕ್ಕುಡಿ ಎಕ್ಸ್‌ಪ್ರೆಸ್‌ ರಾಮನಗರ ನಿಲ್ದಾಣದಲ್ಲೇ ನಿಂತಿದ್ದು, ಹಳಿಗಳ ಜೋಡಣೆ ಕಾರ್ಯಕ್ಕೆ ಸಿದ್ಧತೆ ನಡೆದಿದೆ. ಮತ್ತೊಂದು ಹಳಿಯಲ್ಲಿ ಬೆಂಗಳೂರು–ಮೈಸೂರು ನಡುವಿನ ರೈಲುಗಳು ಸಂಚಾರ ಮುಂದುವರಿಸಿದವು.

ಭಾನುವಾರವಾದ್ದರಿಂದ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು, ತೂತುಕ್ಕುಡಿ ರೈಲಿನಲ್ಲಿದ್ದವರು ಬೆಂಗಳೂರಿಗೆ ಪ್ರಯಾಣ ಮುಂದುವರಿಸಲು ಪರದಾಡಿದರು. ಮುಂಗಡ ಟಿಕೆಟ್‌ ಕಾಯ್ದಿರಿಸಿದ್ದ ಪ್ರಯಾಣಿಕರು ನಿಲ್ದಾಣದಲ್ಲೇ ನಿಂತಿದ್ದು, ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ನಿಲ್ದಾಣದ ಅಧಿಕಾರಿಗಳನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT