ಬೇರ್ಪಟ್ಟ ತೂತುಕುಡಿ ಎಕ್ಸ್‌ಪ್ರೆಸ್‌ ರೈಲು ಬೋಗಿಗಳು! 
ರಾಜ್ಯ

ರಾಮನಗರ: ಚಲಿಸುವಾಗಲೇ ತೂತುಕುಡಿ ಎಕ್ಸ್‌ಪ್ರೆಸ್‌ ರೈಲು ಬೋಗಿಗಳು ಬೇರ್ಪಟ್ಟು ಅವಘಡ!

ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟೆ ಆತಂಕಕಾರಿ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರ: ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟೆ ಆತಂಕಕಾರಿ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರದ ರೈಲು ನಿಲ್ದಾಣದಲ್ಲಿ ಭಾನುವಾರ ರಾತ್ರಿ ಚಲಿಸುತ್ತಿದ್ದ ರೈಲೊಂದರ ಬೋಗಿಗಳು ಬೇರ್ಪಟಿದ್ದು, ಈ ವೇಳೆ ರೈಲಿನಿಂದ ಪ್ರಯಾಣಿಕರು ಆತಂಕಕ್ಕೆ ಒಳಗಾದರು. ಮೈಸೂರಿನಿಂದ ಬೆಂಗಳೂರು ಕಡೆಗೆ ಹೊರಟಿದ್ದ ತೂತುಕುಡಿ ಎಕ್ಸ್‌ಪ್ರೆಸ್‌ ರಾತ್ರಿ 8ರ ವೇಳೆಗೆ ರಾಮನಗರ ನಿಲ್ದಾಣ ತಲುಪಿದ್ದು, ಅಲ್ಲಿಂದ ಮತ್ತೆ ಪ್ರಯಾಣ ಮುಂದುವರಿಸುತ್ತಲೇ ಶಬ್ದ ಕಾಣಿಸಿಕೊಂಡಿತು. ನೋಡುನೋಡುತ್ತಲೇ ರೈಲಿನ ಮಧ್ಯಭಾಗದ ಬೋಗಿಗಳು ಬೇರ್ಪಟ್ಟಿವೆ. 

ಇದರಿಂದ ರೈಲಿನಲ್ಲಿ ಇದ್ದ ಪ್ರಯಾಣಿಕರು ಬೆಚ್ಚಿ ಬಿದ್ದರು. ನಂತರ ರೈಲು ಅಲ್ಲಿಯೇ ನಿಂತಿತು. ಘಟನೆಯಲ್ಲಿ ಅದೃಷ್ಟವಶಾತ್‌ ಯಾರಿಗೂ ಗಾಯವಾಗಿಲ್ಲ.

ಈ ಬಗ್ಗೆ ಮಾಹಿತಿ ನೀಡಿರುವ ಪ್ರಯಾಣಿಕರೊಬ್ಬರು, 'ರೈಲು ರಾಮನಗರ ನಿಲ್ದಾಣ ಬಿಟ್ಟು ಹೊರಟಿತ್ತು. ಆ ವೇಳೆ ಏಕಾಏಕಿ ಶಬ್ದ ಬಂತು. ನೋಡಿದರೆ ನಾವಿದ್ದ ಬೋಗಿಯು ಮುಂದೆ ಇದ್ದ ಬೋಗಿಯಿಂದ ಬೇರ್ಪಟ್ಟಿದ್ದು, ಹಳಿ ಮೇಲೆ ಹಾಗೆಯೇ ನಿಂತುಕೊಂಡಿತ್ತು. ಇದರಿಂದ ಗಾಬರಿಗೊಂಡೆವು. ಆದಾಗ್ಯೂ ರೈಲ್ವೆ ಸಿಬ್ಬಂದಿ ನೆರವಿಗೆ ಬರಲಿಲ್ಲ’ ಎಂದು ಹೇಳಿದ್ದಾರೆ.

ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯ ರೈಲ್ವೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಘಟನೆ ವಿಚಾರವಾಗಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಘಟನೆ ಬಳಿಕ ತೂತುಕ್ಕುಡಿ ಎಕ್ಸ್‌ಪ್ರೆಸ್‌ ರಾಮನಗರ ನಿಲ್ದಾಣದಲ್ಲೇ ನಿಂತಿದ್ದು, ಹಳಿಗಳ ಜೋಡಣೆ ಕಾರ್ಯಕ್ಕೆ ಸಿದ್ಧತೆ ನಡೆದಿದೆ. ಮತ್ತೊಂದು ಹಳಿಯಲ್ಲಿ ಬೆಂಗಳೂರು–ಮೈಸೂರು ನಡುವಿನ ರೈಲುಗಳು ಸಂಚಾರ ಮುಂದುವರಿಸಿದವು.

ಭಾನುವಾರವಾದ್ದರಿಂದ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು, ತೂತುಕ್ಕುಡಿ ರೈಲಿನಲ್ಲಿದ್ದವರು ಬೆಂಗಳೂರಿಗೆ ಪ್ರಯಾಣ ಮುಂದುವರಿಸಲು ಪರದಾಡಿದರು. ಮುಂಗಡ ಟಿಕೆಟ್‌ ಕಾಯ್ದಿರಿಸಿದ್ದ ಪ್ರಯಾಣಿಕರು ನಿಲ್ದಾಣದಲ್ಲೇ ನಿಂತಿದ್ದು, ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ನಿಲ್ದಾಣದ ಅಧಿಕಾರಿಗಳನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT