ರಾಜ್ಯ

ಬ್ರಹ್ಮಾವರ: ಮೀನು ಹಿಡಿಯಲು ಹೋದ 4 ಮಂದಿ ಮುಳುಗಿ ಸಾವು

Srinivasamurthy VN

ಉಡುಪಿ: ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ನೀರುಪಾಲಾಗಿರುವಂತಹ ಘಟನೆ ಜಿಲ್ಲೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಕ್ಕುಡೆ ಕಿಣಿಯರ ಕುದ್ರು ಬಳಿ ನದಿಯಲ್ಲಿ ಈ ದುರಂತ ನಡೆದಿದ್ದು, ಮೃತರನ್ನು ಇಬಾಜ್, ಫಜಾನ್, ಸೂಫಾನ್, ಫರಾನ್ ಎಂದು ಗುರುತಿಸಲಾಗಿದೆ. 

ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಮೂಲದವರು ಎಂದು ಗುರುತಿಸಲಾಗಿದೆ. ರಂಜಾನ್ ಹಬ್ಬಕ್ಕೆ ಬ್ರಹ್ಮಾವರದ ಸಂಬಂಧಿಕರ ಮನೆಗೆ ಬಂದಿದ್ದರು. ದೋಣಿ ಮೂಲಕ ಮೀನು ಹಿಡಿಯಲು ಏಳು ಯುವಕರು ತೆರಳಿದ್ದರು. 

ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ಕೊಚ್ಚಿ ಹೋಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಅಗ್ನಿಶಾಮಕ ದಳ, ಪೊಲೀಸರು, ಸ್ಥಳೀಯರಿಂದ ಶೋಧ ಕಾರ್ಯ ನಡೆಯುತ್ತಿದೆ.
 

SCROLL FOR NEXT