ಅಮಿತ್ ಶಾ 
ರಾಜ್ಯ

ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ, ಪ್ರಾರ್ಥನೆ ಸಲ್ಲಿಕೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಇಂದಿನಿಂದ ಅಮಿತ್ ಶಾ ಅವರು ಮೂರು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಆರಂಭಿಸಿದ್ದಾರೆ. ನಂತರ ಹಾಸನದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿರುವ ದಕ್ಷಿಣದ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ, ಸತತ ಎರಡನೇ ಅವಧಿಗೆ ಚುನಾವಣಾ ಪ್ರಚಾರಕ್ಕಾಗಿ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಇಂದಿನಿಂದ ಮೂರು ದಿನಗಳ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಸಿಡ್ಲಘಟ್ಟದಲ್ಲಿ ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ. ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ದೇವಸ್ಥಾನಕ್ಕೂ ಭೇಟಿ ನೀಡಲಿದ್ದಾರೆ ಮತ್ತು ಹಲವಾರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಏಪ್ರಿಲ್ 29 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡುವುದರೊಂದಿಗೆ ಪಕ್ಷದ ಬೃಹತ್ ಚುನಾವಣಾ ಪ್ರಚಾರಕ್ಕೆ ಚಾಲನೆ ದೊರೆಯುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ

News wrap 24-02-2026| 2.7 ಲಕ್ಷ ಖಾಲಿ ಹುದ್ದೆ ಭರ್ತಿಗೆ ಆಗ್ರಹ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ; Shivamogga: 16 ವರ್ಷದ ಬಾಲಕನ ಕೊಲೆ; ಪರಿಸ್ಥಿತಿ ಉದ್ವಿಗ್ನ; ಕಾಂತಾರ ಬಗ್ಗೆ ಅಪಹಾಸ್ಯ ರಣ್ವೀರ್ ಸಿಂಗ್ ಗೆ ಹೈಕೋರ್ಟ್ ಚಾಟಿ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು

SCROLL FOR NEXT