ಎಸ್. ಗಿರೀಶ್ ಮತ್ತು ರಿಷ್ಯಂತ್ 
ರಾಜ್ಯ

ವಿಧಾನಸಭೆ ಚುನಾವಣಾ ಅಖಾಡದಲ್ಲಿ ಮಾವಂದಿರು: ಇಬ್ಬರು ಐಪಿಎಸ್ ಅಳಿಯಂದಿರಿಗೆ 'ವರ್ಗಾವಣೆ ಭಾಗ್ಯ'!

ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಎಸ್ಪಿ ಮತ್ತು ನಿರ್ದೇಶಕರಾದ ಧರ್ಮೇಂದರ್ ಕುಮಾರ್ ಮೀನಾ ಅವರನ್ನು ವೈಟ್‌ಫೀಲ್ಡ್ ಡಿಸಿಪಿಯಾಗಿ ನಿಯೋಜಿಸಲಾಗಿದೆ.

ಬೆಂಗಳೂರು: ವಿಧಾನಸಭಾ ಚುನಾವಣೆಗೂ ಮುನ್ನ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಎಸ್ಪಿ ಮತ್ತು ನಿರ್ದೇಶಕರಾದ ಧರ್ಮೇಂದರ್ ಕುಮಾರ್ ಮೀನಾ ಅವರನ್ನು ವೈಟ್‌ಫೀಲ್ಡ್ ಡಿಸಿಪಿಯಾಗಿ ನಿಯೋಜಿಸಲಾಗಿದೆ.

ಕಲಬುರಗಿಯ ಪೊಲೀಸ್ ತರಬೇತಿ ಶಾಲೆಯ ಎಸ್ಪಿ ಮತ್ತು ಪ್ರಾಂಶುಪಾಲರಾದ ಡಾ.ಅರುಣ್ ಕೆ ಅವರನ್ನು ದಾವಣಗೆರೆಯ ಎಸ್ಪಿಯಾಗಿ ನಿಯೋಜಿಸಲಾಗಿದೆ.

ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ಭಾನುವಾರ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಎಸ್. ಗಿರೀಶ್ ಅವರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಧರ್ಮೇಂದ್ರಕುಮಾರ್ ಮೀನಾ ಅವರನ್ನು ವರ್ಗಾಯಿಸಲಾಗಿದೆ. ದಾವಣಗೆರೆ ಎಸ್ಪಿ ಸಿ.ಬಿ. ರಿಷ್ಯಂತ್ ಅವರನ್ನು ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಡಾ. ಕೆ. ಅರುಣ್ ಅವರನ್ನು ವರ್ಗಾವಣೆ ಮಾಡಲಾಗಿದೆ.

‘ಗಿರೀಶ್ ಅವರ ಮಾವ ಕೆ.ಎನ್‌. ರಾಜಣ್ಣ, ಮಧುಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ. ರಿಷ್ಯಂತ್ ಅವರ ಮಾವ ಎಸ್. ಮುನಿರತ್ನ, ಬೆಂಗಳೂರು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಅಧಿಕಾರಿಗಳ ನೇರ ಸಂಬಂಧಿಗಳು ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT