ಸಾಂದರ್ಭಿಕ ಚಿತ್ರ 
ರಾಜ್ಯ

ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ: ಎಎಪಿ

ಸರ್ಕಾರದ ಕಳಪೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದಾಗಿ ಪಿಯುಸಿ ಮಕ್ಕಳ ಭವಿಷ್ಯವನ್ನು ಸರ್ಕಾರ ಅಂಧಕಾರಕ್ಕೆ ತಳ್ಳಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ.

ಬೆಂಗಳೂರು: ಸರ್ಕಾರದ ಕಳಪೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದಾಗಿ ಪಿಯುಸಿ ಮಕ್ಕಳ ಭವಿಷ್ಯವನ್ನು ಸರ್ಕಾರ ಅಂಧಕಾರಕ್ಕೆ ತಳ್ಳಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ.

ಬೆಂಗಳೂರಿನ ಎಎಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಎಎಪಿ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ, “ಕರ್ನಾಟಕದಲ್ಲಿ ಪಿಯುಸಿ ಫಲಿತಾಂಶ ಬಂದಿದೆ. ಖಾಸಗಿ ಶಾಲೆಗಳಲ್ಲಿ 76.67% ಫಲಿತಾಂಶ, ಸರ್ಕಾರಿ ಶಾಲೆಗಳಲ್ಲಿ 63.63% ಫಲಿತಾಂಶ ಬಂದಿದೆ. ಖಾಸಗಿ ಮತ್ತು ಸರ್ಕಾರಿ ಶಾಲೆಗಳ ನಡುವೆ ಹೋಲಿಕೆ ಮಾಡುವುದು ತುಂಬಾ ಅವಶ್ಯಕ. ಏಕೆಂದರೆ, ಎಎಪಿ ನಿಂತಿರುವುದೇ ಸರ್ಕಾರಿ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಯ ವಿಚಾರದ ಮೇಲೆ” ಎಂದರು.

“ಕಳೆದ ಕೊವಿಡ್ ಸಮಯದಲ್ಲಿ ಎಲ್ಲ ರಾಜ್ಯದಲ್ಲೂ ಮಕ್ಕಳನ್ನ ತೇರ್ಗಡೆ ಮಾಡಲಾಗಿತ್ತು. ಆದರೆ, ದೆಹಲಿಯಲ್ಲಿ 2021ರಲ್ಲಿ 99.96% ರಷ್ಟು ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಬಂದಿದೆ. ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 63.63% ಪಿಯುಸಿ ಫಲಿತಾಂಶ ಬಂದಿದೆ ಎಂದು ಹೇಳಿದರು. ಕರ್ನಾಟಕದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಗುಣಮಟ್ಟದ ಶಿಕ್ಷಣದ ಜೊತೆಗೆ ಶೇ.ರಷ್ಟಪ ಫಲಿತಾಂಶ ಹೊರತರುತ್ತೇವೆ, ಇದಕ್ಕೆ ದೆಹಲಿ ಸರ್ಕಾರಿ ಶಾಲೆಗಳು ಸಾಕ್ಷಿ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಅವರು ಶಿಕ್ಷಣ ತಜ್ಞರಂತೆ ಮಾತನಾಡುತ್ತಿಲ್ಲ, ರಾಜಕಾರಣಿಗಳಂತೆ ಮಾತನಾಡುತ್ತಿದ್ದಾರೆ. ಇದನ್ನು ರಾತ್ರೋರಾತ್ರಿ ಮಾಡಲು ಸಾಧ್ಯವಿಲ್ಲ. ಉತ್ತಮ ಬೋಧನಾ ವಿಧಾನಗಳನ್ನು ಬಳಸಿಕೊಂಡು ಮೂಲಸೌಕರ್ಯ ಮತ್ತು ಬೋಧನಾ ಗುಣಮಟ್ಟವನ್ನು ಸುಧಾರಿಸಲು ನಾವು ಕೆಲಸ ಮಾಡಿದ್ದೇವೆ ಮತ್ತು ಮುಂದಿನ ದಿನಗಳಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT