ಕೇಂದ್ರ ಚುನಾವಣಾ ಆಯೋಗ 
ರಾಜ್ಯ

ವಿಧಾನಸಭೆ ಚುನಾವಣೆ: ಮಕ್ಕಳನ್ನು ಬಳಸಿಕೊಂಡ ಆರೋಪ; ಸಂಘಟಕರ ವಿರುದ್ಧ ಏಳು ಎಫ್‌ಐಆರ್ ದಾಖಲು

ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದೆ. ಇದೆ ವೇಳೆ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಬಳ್ಳಾರಿ , ಕೊಪ್ಪಳ ಸೇರಿದಂತೆ 7 ಜಿಲ್ಲೆಗಳಲ್ಲಿ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ 7 ಎಫ್ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದೆ. ಇದೆ ವೇಳೆ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಬಳ್ಳಾರಿ , ಕೊಪ್ಪಳ ಸೇರಿದಂತೆ 7 ಜಿಲ್ಲೆಗಳಲ್ಲಿ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ 7 ಎಫ್ಐಆರ್ ದಾಖಲಿಸಿದ್ದಾರೆ.

ಹಣ ಹಂಚಿಕೆ, ರ್ಯಾಲಿಗಳಲ್ಲಿ ಮಕ್ಕಳನ್ನು ಬಳಸಿಕೊಂಡ ಕಾರಣ ಆಯೋಜಕರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಏಪ್ರಿಲ್ 18 ಮತ್ತು 19 ರಂದು ರ್ಯಾಲಿಯಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆಯಲ್ಲಿ  ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ತಿದ್ದುಪಡಿ ಕಾಯ್ದೆ ಮತ್ತು ಬಾಲಾಪರಾಧಿ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ದಾಖಲಾದ ಎಲ್ಲಾ ಎಫ್‌ಐಆರ್‌ಗಳ ಪ್ರತಿಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಬಳಿ ಇವೆ. ಅವುಗಳಲ್ಲಿ ಹೆಚ್ಚಿನವು ಮಕ್ಕಳನ್ನು ರ್ಯಾಲಿಗಳಲ್ಲಿ ಬಳಸುವುದಕ್ಕೆ ಮತ್ತು ಪಕ್ಷದ ಧ್ವಜಗಳನ್ನು ಹಿಡಿಯುವಂತೆ ಹೇಳಿದ್ದಕ್ಕೆ ಸಂಬಂಧಿಸಿದೆ.

ಮತದಾರರಿಗೆ ಹಣ ಹಂಚಲು ಮಕ್ಕಳನ್ನು ಬಳಸಿಕೊಳ್ಳಲಾಗಿದೆ, ಹೀಗಾಗಿ ಬಳ್ಳಾರಿಯ ಸಿರುಗಪ್ಪ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಬಿಜೆಪಿಯ ದೊಡ್ಡ ಹುಲುಗಪ್ಪ ಮತ್ತು ಕೆಆರ್‌ಪಿಪಿಯ ಜಂಗಮ ತಾಲೂಕು ಅಧ್ಯಕ್ಷ ಸಿದ್ದಯ್ಯ ಸ್ವಾಮಿ ಎಂಬುವರನ್ನು ಮೊದಲ ಆರೋಪಿಗಳಾಗಿ ಹೆಸರಿಸಲಾಗಿದೆ.

ಬಳ್ಳಾರಿ ರಸ್ತೆಯ ತಾಲೂಕು ಕ್ರೀಡಾಂಗಣದಲ್ಲಿ ಮತದಾರರಿಗೆ 100 ಮತ್ತು 200 ರೂ.ಗಳನ್ನು ಹಂಚಲು ಮಕ್ಕಳನ್ನು ಬಳಸಿಕೊಳ್ಳುತ್ತಿರುವ ವಿಡಿಯೋ ತುಣುಕುಗಳು ಲಭ್ಯವಾಗಿವೆ ಎಂದು ಸಿದ್ದಯ್ಯ ಸ್ವಾಮಿ ವಿರುದ್ಧದ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಕೊಪ್ಪಳದಲ್ಲಿ ವಿವಿಧ ಪಕ್ಷಗಳ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಾಮೀದ್ ಮನಿಯಾರ್ (ಕಾಂಗ್ರೆಸ್), ಮನೋಹರಗೌಡ ಹೇರೂರು (ಕೆಆರ್‌ಪಿಪಿ), ಶೇಖನಬಿಸಾಬ್ (ಜೆಡಿಎಸ್) ಮತ್ತು ಕಾಶಿನಾಥ ಚಿತ್ರಗಾರ (ಬಿಜೆಪಿ) ವಿರುದ್ಧ ಗಂಗಾವತಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದೆ.

ಕೊಪ್ಪಳ ಟೌನ್ ಪೊಲೀಸ್ ಠಾಣೆಯಲ್ಲಿ ಅಕ್ಬರ್ ಪಾಷಾ ಪಲ್ಟನ್, ಮುಸ್ಲಿಂ ಕಾಂಗ್ರೆಸ್ ಪಕ್ಷ ಮತ್ತು ಇತರ ಕಾಂಗ್ರೆಸ್ ಸದಸ್ಯರ ವಿರುದ್ಧ ಪ್ರಕರಣಗಳು ದಾಖಲಾಗಿವೆ.  ನಾಮಪತ್ರ ಸಲ್ಲಿಸುವ ಮುನ್ನವೇ ಪಕ್ಷದ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಅವರಿಗಾಗಿ ಹೇರೂರು ರ್ಯಾಲಿ ಆಯೋಜಿಸಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ. ಇದು ಗಂಭೀರ ಸಮಸ್ಯೆಯಾಗಿದ್ದು, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಡಿಸಿ ಸುಮತಿ ಟಿಎನ್‌ಐಇಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT