ಪುಟ್ಟ ಪ್ರತಿಭೆ ಶಾಲ್ಮಲಿ ಹಾಗೂ ಪ್ರಧಾನಿ ಮೋದಿ. 
ರಾಜ್ಯ

ಚುನಾವಣೆಯಲ್ಲಿ ಬ್ಯುಸಿಯಿದ್ದರೂ ಪಿಯಾನೋ ನುಡಿಸುವ ಪುಟ್ಟ ಪೋರಿ ಪ್ರತಿಭೆಗೆ ಮನಸೋತ ಪ್ರಧಾನಿ ಮೋದಿ!

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ಯೂಸಿಯಾಗಿದ್ದಾರೆ. ಈ ನಡುವಲ್ಲೂ ಪುಟ್ಟ ಪ್ರತಿಭೆಗಳ ಗುರುತಿಸಿ, ಅವರನ್ನು ಶ್ಲಾಘಿಸುವುದನ್ನು ಮಾತ್ರ ಮೋದಿಯವರು ಮರೆತಿಲ್ಲ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ಯೂಸಿಯಾಗಿದ್ದಾರೆ. ಈ ನಡುವಲ್ಲೂ ಪುಟ್ಟ ಪ್ರತಿಭೆಗಳ ಗುರುತಿಸಿ, ಅವರನ್ನು ಶ್ಲಾಘಿಸುವುದನ್ನು ಮಾತ್ರ ಮೋದಿಯವರು ಮರೆತಿಲ್ಲ.

ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ, ತಂಬೆಲರಲಿ ಹಬ್ಬುತ್ತಿದೆ ಕೋಕಿಲ ಸಂಗೀತಾ ಎಂಬ ಕನ್ನಡ ಹಾಡಿಗೆ ಪಿಯಾನೋ ನುಡಿಸಿದ್ದ ಪುಟ್ಟ ಬಾಲಕಿಯ ಪ್ರತಿಭೆಯನ್ನು ಮೋದಿಯವರು ಕೊಂಡಾಡಿದ್ದಾರೆ.

ಇತ್ತೀಚೆಗೆ ಅನಂತ್ ಕುಮಾರ್ ಎಂಬುವವರು ಶಾಲ್ಮಲಿ ಎಂಬ ಪುಟ್ಟ ಬಾಲಕಿ ಕೀಬೋರ್ಡ್ ನುಡಿಸುತ್ತಾ ತನ್ನ ತಾಯಿಯ ಜೊತೆ ಹಾಡು ಹಾಡುವ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಶೇರ್ ಮಾಡಿದ್ದರು.

ಈ ವಿಡಿಯೋವನ್ನು ಗಮನಿಸಿ ಪ್ರಧಾನಿ ಮೋದಿ ಅವರು, ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿದ್ದು, ಬಾಲಕಿಯನ್ನು ಶ್ಲಾಘಿಸಿದ್ದಾರೆ.

ಕೆ.ಎಸ್. ನರಸಿಂಹಸ್ವಾಮಿ ಅವರು ರಚಿಸಿದ ಪಲ್ಲವಗಳ ಪಲ್ಲವಿಯಲ್ಲಿ  ಹಾಡಿಗೆ ತಕ್ಕಂತೆ ಪಿಯಾನೋ ಬಾಲಕಿ ಪಿಯಾನೋ ನುಡಿಸಿದ್ದು, ಬಾಲಕಿಯ ಪ್ರತಿಭೆಗೆ ಮೋದಿಯವರು ಫಿದಾ ಆಗಿದ್ದಾರೆ.

ಶಾಲ್ಮಲಿಯ ಅಸಾಧಾರಣ ಪ್ರತಿಭೆ, ಸೃಜನಶೀಲತೆಯನ್ನು ಮೋದಿಯವರು ಹೊಗಳಿದ್ದು, ಭವಿಷ್ಯದಲ್ಲಿ ಉನ್ನತಮಟ್ಟಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದ್ದಾರೆ.

ವಿಡಿಯೋವನ್ನು ಹಂಚಿಕೊಂಡಿರುವ ಮೋದಿಯವರು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ, ಈ ವಿಡಿಯೋ ಪ್ರತಿಯೊಬ್ಬರ ಮುಖದ ಮೇಲೆ ಮುಗುಳುನಗೆ ತರಿಸಬಹುದು. ಅನನ್ಯ ಪ್ರತಿಭೆ ಹಾಗೂ ಸೃಜನಶೀಲತೆ. ಶಾಲ್ಮಲಿಗೆ ಶುಭಹಾರೈಕೆಗಳು ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್