ಪುಟ್ಟ ಪ್ರತಿಭೆ ಶಾಲ್ಮಲಿ ಹಾಗೂ ಪ್ರಧಾನಿ ಮೋದಿ. 
ರಾಜ್ಯ

ಚುನಾವಣೆಯಲ್ಲಿ ಬ್ಯುಸಿಯಿದ್ದರೂ ಪಿಯಾನೋ ನುಡಿಸುವ ಪುಟ್ಟ ಪೋರಿ ಪ್ರತಿಭೆಗೆ ಮನಸೋತ ಪ್ರಧಾನಿ ಮೋದಿ!

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ಯೂಸಿಯಾಗಿದ್ದಾರೆ. ಈ ನಡುವಲ್ಲೂ ಪುಟ್ಟ ಪ್ರತಿಭೆಗಳ ಗುರುತಿಸಿ, ಅವರನ್ನು ಶ್ಲಾಘಿಸುವುದನ್ನು ಮಾತ್ರ ಮೋದಿಯವರು ಮರೆತಿಲ್ಲ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ಯೂಸಿಯಾಗಿದ್ದಾರೆ. ಈ ನಡುವಲ್ಲೂ ಪುಟ್ಟ ಪ್ರತಿಭೆಗಳ ಗುರುತಿಸಿ, ಅವರನ್ನು ಶ್ಲಾಘಿಸುವುದನ್ನು ಮಾತ್ರ ಮೋದಿಯವರು ಮರೆತಿಲ್ಲ.

ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ, ತಂಬೆಲರಲಿ ಹಬ್ಬುತ್ತಿದೆ ಕೋಕಿಲ ಸಂಗೀತಾ ಎಂಬ ಕನ್ನಡ ಹಾಡಿಗೆ ಪಿಯಾನೋ ನುಡಿಸಿದ್ದ ಪುಟ್ಟ ಬಾಲಕಿಯ ಪ್ರತಿಭೆಯನ್ನು ಮೋದಿಯವರು ಕೊಂಡಾಡಿದ್ದಾರೆ.

ಇತ್ತೀಚೆಗೆ ಅನಂತ್ ಕುಮಾರ್ ಎಂಬುವವರು ಶಾಲ್ಮಲಿ ಎಂಬ ಪುಟ್ಟ ಬಾಲಕಿ ಕೀಬೋರ್ಡ್ ನುಡಿಸುತ್ತಾ ತನ್ನ ತಾಯಿಯ ಜೊತೆ ಹಾಡು ಹಾಡುವ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಶೇರ್ ಮಾಡಿದ್ದರು.

ಈ ವಿಡಿಯೋವನ್ನು ಗಮನಿಸಿ ಪ್ರಧಾನಿ ಮೋದಿ ಅವರು, ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿದ್ದು, ಬಾಲಕಿಯನ್ನು ಶ್ಲಾಘಿಸಿದ್ದಾರೆ.

ಕೆ.ಎಸ್. ನರಸಿಂಹಸ್ವಾಮಿ ಅವರು ರಚಿಸಿದ ಪಲ್ಲವಗಳ ಪಲ್ಲವಿಯಲ್ಲಿ  ಹಾಡಿಗೆ ತಕ್ಕಂತೆ ಪಿಯಾನೋ ಬಾಲಕಿ ಪಿಯಾನೋ ನುಡಿಸಿದ್ದು, ಬಾಲಕಿಯ ಪ್ರತಿಭೆಗೆ ಮೋದಿಯವರು ಫಿದಾ ಆಗಿದ್ದಾರೆ.

ಶಾಲ್ಮಲಿಯ ಅಸಾಧಾರಣ ಪ್ರತಿಭೆ, ಸೃಜನಶೀಲತೆಯನ್ನು ಮೋದಿಯವರು ಹೊಗಳಿದ್ದು, ಭವಿಷ್ಯದಲ್ಲಿ ಉನ್ನತಮಟ್ಟಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದ್ದಾರೆ.

ವಿಡಿಯೋವನ್ನು ಹಂಚಿಕೊಂಡಿರುವ ಮೋದಿಯವರು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ, ಈ ವಿಡಿಯೋ ಪ್ರತಿಯೊಬ್ಬರ ಮುಖದ ಮೇಲೆ ಮುಗುಳುನಗೆ ತರಿಸಬಹುದು. ಅನನ್ಯ ಪ್ರತಿಭೆ ಹಾಗೂ ಸೃಜನಶೀಲತೆ. ಶಾಲ್ಮಲಿಗೆ ಶುಭಹಾರೈಕೆಗಳು ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT