ಆಪರೇಷನ್ ಕಾವೇರಿ 
ರಾಜ್ಯ

ಆಪರೇಷನ್ ಕಾವೇರಿ: ಯುದ್ಧ ಪೀಡಿತ ಸುಡಾನ್​ನಿಂದ 362 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ಆಗಮನ

ಆಂತರಿಕ ಯುದ್ಧ ಪೀಡಿತ ಸುಡಾನ್ ನಲ್ಲಿ ಸಿಲುಕಿದ್ದ 362 ಕನ್ನಡಿಗರನ್ನು ಆಪರೇಷನ್ ಕಾವೇರಿ ಮೂಲಕ ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲಾಗಿದೆ. 

ಬೆಂಗಳೂರು: ಆಂತರಿಕ ಯುದ್ಧ ಪೀಡಿತ ಸುಡಾನ್ ನಲ್ಲಿ ಸಿಲುಕಿದ್ದ 362 ಕನ್ನಡಿಗರನ್ನು ಆಪರೇಷನ್ ಕಾವೇರಿ ಮೂಲಕ ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲಾಗಿದೆ. 

362 ಕನ್ನಡಿಗರನ್ನು ಭಾರತೀಯ ಸೇನಾ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಈ ಪೈಕಿ 56 ಜನ ತಮಿಳಿಗರಿದ್ದಾರೆ. ಸದ್ಯ ಸ್ಕ್ರೀನಿಂಗ್​, ಕೊವಿಡ್ ಟೆಸ್ಟ್​ ಮಾಡಿ ವಿಳಾಸ ಪಡೆಯಲಾಗಿದೆ.

ಸುರಕ್ಷಿತವಾಗಿ ಸುಡಾನ್​ನಿಂದ ಕರೆತಂದಿರುವ ಕನ್ನಡಿಗರನ್ನು ಸ್ವಾಗತಿಸಲು ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ರಣದೀಪ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದಾರೆ. 

ಸ್ವಗ್ರಾಮಗಳಿಗೆ ತೆರಳಲು ಕನ್ನಡಿಗರಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಏರ್ಪೋಟ್​ನಿಂದ ಅವರು ತಮ್ಮ ಊರುಗಳಿಗೆ ತೆರಳಲು ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಮೈಸೂರು ಸೇರಿದಂತೆ ಹಲವಡೆಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT