ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ಸಾರ್ವಜನಿಕವಾಗಿ ಮೇಕೆ ಬಲಿ ಕೊಟ್ಟ ವ್ಯಕ್ತಿ ವಿರುದ್ಧ ಕೇಸ್ ದಾಖಲು

ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ ಗ್ರಾಮದಲ್ಲಿ ಯುಗಾದಿ ಹಬ್ಬದ ವೇಳೆ ಸಾರ್ವಜನಿಕವಾಗಿ ಮೂರು ಮೇಕೆಗಳನ್ನು ಬಲಿ ಕೊಟ್ಟ ವ್ಯಕ್ತಿಯೊಬ್ಬನ ವಿರುದ್ಧ ಚಿತ್ರದುರ್ಗ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ ಗ್ರಾಮದಲ್ಲಿ ಯುಗಾದಿ ಹಬ್ಬದ ವೇಳೆ ಸಾರ್ವಜನಿಕವಾಗಿ ಮೂರು ಮೇಕೆಗಳನ್ನು ಬಲಿ ಕೊಟ್ಟ ವ್ಯಕ್ತಿಯೊಬ್ಬನ ವಿರುದ್ಧ ಚಿತ್ರದುರ್ಗ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪೇಟಾ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಮೂರು ಮೇಕೆಗಳನ್ನು ಕತ್ತಿಯಂತಹ ಆಯುಧದಿಂದ ಒಂದರ ಹಿಂದೆ ಒಂದರಂತೆ ತಲೆ ಕಡಿದಿರುವ ಘಟನೆಯನ್ನು ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎಂದು ಪೇಟಾ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪೇಟಾ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲೇಖಿಸಿದೆ ಮತ್ತು ಪರವಾನಗಿ ಪಡೆದ ಕಸಾಯಿಖಾನೆಗಳಲ್ಲಿ ಮಾತ್ರ ಪ್ರಾಣಿಗಳನ್ನು ವಧೆ ಮಾಡಬಹುದು ಎಂದು ಹೇಳಿದೆ.

ಆರೋಪಿಯ ವಿರುದ್ಧ ಕರ್ನಾಟಕ ಪ್ರಾಣಿ ಬಲಿ ತಡೆ ಕಾಯ್ದೆಯ ಸೆಕ್ಷನ್ 3,4,5 ಮತ್ತು 6, ಐಪಿಸಿ ಸೆಕ್ಷನ್ 34 ಮತ್ತು 429 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT