ರಾಜ್ಯ

ಚಿತ್ರದುರ್ಗ: ಸಾರ್ವಜನಿಕವಾಗಿ ಮೇಕೆ ಬಲಿ ಕೊಟ್ಟ ವ್ಯಕ್ತಿ ವಿರುದ್ಧ ಕೇಸ್ ದಾಖಲು

Lingaraj Badiger

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ ಗ್ರಾಮದಲ್ಲಿ ಯುಗಾದಿ ಹಬ್ಬದ ವೇಳೆ ಸಾರ್ವಜನಿಕವಾಗಿ ಮೂರು ಮೇಕೆಗಳನ್ನು ಬಲಿ ಕೊಟ್ಟ ವ್ಯಕ್ತಿಯೊಬ್ಬನ ವಿರುದ್ಧ ಚಿತ್ರದುರ್ಗ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪೇಟಾ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಮೂರು ಮೇಕೆಗಳನ್ನು ಕತ್ತಿಯಂತಹ ಆಯುಧದಿಂದ ಒಂದರ ಹಿಂದೆ ಒಂದರಂತೆ ತಲೆ ಕಡಿದಿರುವ ಘಟನೆಯನ್ನು ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎಂದು ಪೇಟಾ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪೇಟಾ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲೇಖಿಸಿದೆ ಮತ್ತು ಪರವಾನಗಿ ಪಡೆದ ಕಸಾಯಿಖಾನೆಗಳಲ್ಲಿ ಮಾತ್ರ ಪ್ರಾಣಿಗಳನ್ನು ವಧೆ ಮಾಡಬಹುದು ಎಂದು ಹೇಳಿದೆ.

ಆರೋಪಿಯ ವಿರುದ್ಧ ಕರ್ನಾಟಕ ಪ್ರಾಣಿ ಬಲಿ ತಡೆ ಕಾಯ್ದೆಯ ಸೆಕ್ಷನ್ 3,4,5 ಮತ್ತು 6, ಐಪಿಸಿ ಸೆಕ್ಷನ್ 34 ಮತ್ತು 429 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

SCROLL FOR NEXT