ಸಂಗ್ರಹ ಚಿತ್ರ 
ರಾಜ್ಯ

ಸಮಗ್ರ ಗರ್ಭಪಾತ ಆರೈಕೆ: ರಾಜ್ಯಕ್ಕೆ 2ನೇ ಸ್ಥಾನ

‘ಸಮಗ್ರ ಗರ್ಭಪಾತ ಆರೈಕೆ’ (ಸಿಎಸಿ) ಕಾರ್ಯಕ್ರಮ ಅನುಷ್ಠಾನದಲ್ಲಿ ಕರ್ನಾಟಕವು ದೇಶದಲ್ಲಿ ಎರಡನೇ ಅತ್ಯುತ್ತಮ ರಾಜ್ಯ ಎಂಬ ಗೌರವಕ್ಕೆ ಭಾಜನವಾಗಿದೆ.

ಬೆಂಗಳೂರು: ‘ಸಮಗ್ರ ಗರ್ಭಪಾತ ಆರೈಕೆ’ (ಸಿಎಸಿ) ಕಾರ್ಯಕ್ರಮ ಅನುಷ್ಠಾನದಲ್ಲಿ ಕರ್ನಾಟಕವು ದೇಶದಲ್ಲಿ ಎರಡನೇ ಅತ್ಯುತ್ತಮ ರಾಜ್ಯ ಎಂಬ ಗೌರವಕ್ಕೆ ಭಾಜನವಾಗಿದೆ.

ಏಪ್ರಿಲ್ 24 ಮತ್ತು 25 ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸಮಗ್ರ ಗರ್ಭಪಾತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಆರೋಗ್ಯ ಇಲಾಖೆಗೆ ಪ್ರಶಸ್ತಿ ಪ್ರದಾನ ಮಾಡಿತು.

ಈ ಕಾರ್ಯಕ್ರಮದಲ್ಲಿ ಗರ್ಭಪಾತದ ಆರೈಕೆ ಸುಧಾರಿಸುವ ಸವಾಲುಗಳು ಹಾಗೂ ಆರೈಕೆಯ ಬಗ್ಗೆ ಚರ್ಚಿಸಲಾಯಿತು.

ಅಸುರಕ್ಷಿತ ಗರ್ಭಪಾತವು ತಾಯಿಯ ಮರಣಕ್ಕೆ ಕಾರಣವಾಗಲಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸುರಕ್ಷಿತ ಗರ್ಭಪಾತ ಸೇವೆಗಳನ್ನು ಒದಗಿಸಲು ಕ್ರಮವಹಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಸಿಎಸಿ ಕಾರ್ಯಕ್ರಮವು  ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತ ಆರೈಕೆಯ ಕಡೆಗೆ ಬಲವಾದ ಬದ್ಧತೆಯನ್ನು ಬೆಳೆಸುವ ಗುರಿಯನ್ನು ಹೊಂದಿದೆ ಎಂದು ಆರೋಗ್ಯಾಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT