ಕೆಂಗೇರಿ ನಾಡಕಚೇರಿಗೆ ಬೆಂಕಿ 
ರಾಜ್ಯ

ಬೆಂಗಳೂರು: ನಾಡ ಕಚೇರಿಯಲ್ಲಿ ಬೆಂಕಿ; ನೂರಾರು ದಾಖಲೆಗಳು ಬೆಂಕಿಗಾಹುತಿ, ಪೊಲೀಸ್ ದೂರು ದಾಖಲು

ಬೆಂಗಳೂರಿನಲ್ಲಿ ನಾಡ ಕಚೇರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ನೂರಾರು ದಾಖಲೆಗಳು ಬೆಂಕಿಗಾಹುತಿಯಾಗಿದೆ.

ಬೆಂಗಳೂರು: ಬೆಂಗಳೂರಿನ ನಾಡ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೂರಾರು ದಾಖಲೆಗಳು ಬೆಂಕಿಗಾಹುತಿಯಾಗಿದೆ.

ಬೆಂಗಳೂರಿನ ಕೆಂಗೇರಿ ಉಪನಗರದ ನಾಡ ಕಚೇರಿಯಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು, ಅಗ್ನಿ ಅನಾಹುತದಲ್ಲಿ ನೂರಾರು ದಾಖಲೆಗಳು ಸುಟ್ಟು ಕರಕಲಾಗಿವೆ. ವಿಚಾರ ತಿಳಿದ ಕೂಡಲೇ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಕೆಂಗೇರಿ ಉಪನಗರದ ನಾಡ ಕಚೇರಿ ಆವರಣದ ಪ್ರವೇಶ ದ್ವಾರದ ಬಳಿಯೇ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಇಡೀ ಕಚೇರಿಗೆ ಆವರಿಸಿತು. ಬೆಂಕಿ ತೀವ್ರವಾಗಿ ವ್ಯಾಪಿಸಿದ ಹಿನ್ನೆಲೆಯಲ್ಲಿ ನೂರಾರು ದಾಖಲೆಗಳು ಸುಟ್ಟು ಕರಕಲಾಗಿದೆ. ಘಟನೆ ಬಳಿಕ ನಾಡ ಕಚೇರಿ ಸಿಬ್ಬಂದಿ ದೂರು ನೀಡಿದ್ದು, ಕೆಂಗೇರಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. 

ಕಂಪ್ಯೂಟರ್ ರೂಂ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಮುಖ ದಾಖಲೆಗಳನ್ನ ನಾಶಪಡಿಸುವ ಉದ್ದೇಶದಿಂದ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.ದೂರು ದಾಖಲಿಸಿಕೊಂಡಿರುವ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT