ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರೀತಿ ನಿರಾಕರಣೆ: ಪೊಲೀಸ್ ಕ್ವಾರ್ಟರ್ಸ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರೀತಿ ನಿರಾಕರಣೆ ಬೇಸತ್ತ ವಿದ್ಯಾರ್ಥಿನಿಯೊಬ್ಬಳು ಕಟ್ಟಡದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಪ್ರೀತಿ ನಿರಾಕರಣೆ ಬೇಸತ್ತ ವಿದ್ಯಾರ್ಥಿನಿಯೊಬ್ಬಳು ಕಟ್ಟಡದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬಿನ್ನಿ ಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಡೆತ್ ನೋಟ್ (Death Note) ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಯಿಶಾ ಬಿ.ಆರ್. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ಬಿಎಸ್ ಸಿ ಕಂಪ್ಯೂಟರ್ ಸೈನ್ಸ್ (BSc Computer Science) ಓದುತ್ತಿದ್ದ ಈಕೆ ಇಂದು (ಭಾನುವಾರ) ಬೆಳಗ್ಗೆ ಬಿನ್ನಿ ಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್ ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪೊಲೀಸ್ ಮೂಲಗಳ ಪ್ರಕಾರ ಭೀಮೇಶ್ ಎಂಬ ಯುವಕನನ್ನು ಆಯಿಶಾ ಪ್ರೀತಿ ಮಾಡುತ್ತಿದ್ದಳು. ಆದರೆ ಇವರಿಬ್ಬರ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ. ಮನೆಯವರು ಪ್ರೀತಿಯನ್ನು ನಿರಾಕರಿಸಿದ್ದರಿಂದ ತನ್ನ ಪ್ರಿಯಕರನ ಮೊಬೈಲ್ ನಂಬರ್ ಕೈ ಮೇಲೆ ಬರೆದುಕೊಂಡು ತನ್ನ ಸಾವಿನ ವಿಚಾರ ಆತನಿಗೆ ತಿಳಿಸುವಂತೆ ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

'ನನ್ನ ಸಾವಿಗೆ ಕಾರಣ ಯಾರೂ ಅಲ್ಲ. ಈ ಜೀವನದ ಮೇಲೆ ಜಿಗುಪ್ಸೆ ಬಂದ ಕಾರಣದಿಂದ ನಾನೇ ಸ್ವತಃ ಈ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನಾನು ನನ್ನ ಕುಟುಂಬಕ್ಕೆ ಹಾಗೂ ಭೀಮೇಶ್ ನಾಯಕ್ ಅವರ ಮೇಲೆ ನೀಡಿದ್ದ ಸುಳ್ಳು ಕೇಸ್‍ನಿಂದ ತುಂಬಾ ಪಶ್ಚಾತ್ತಾಪಪಟ್ಟುಕೊಳ್ಳುತ್ತಿದ್ದೇನೆ. ಭೀಮೆಶ್ ನಾಯಕ್ ತುಂಬಾ ಸೂಕ್ಷ್ಮ ಹಾಗೂ ಮುಗ್ಧ ವ್ಯಕ್ತಿ. ಅವರ ಹಾಗೂ ನನ್ನ ಮಧ್ಯೆ ಯಾವುದೇ ದೈಹಿಕ ಸಂಪರ್ಕವಿರುವುದಿಲ್ಲ. ನಾನು ಮಾಡಿದ ಈ ಸುಳ್ಳು ಕೇಸ್‍ನಿಂದ ಅವರ ತಂದೆ ಅನಾರೋಗ್ಯಕ್ಕೀಡಾಗಿದ್ದಾರೆ. ನನ್ನಿಂದ ಎರಡು ಕುಟುಂಬಗಳಿಗೂ ತುಂಬಾ ನೋವಾಗಿದೆ. ಈ ಪಶ್ಚಾತ್ತಾಪದಿಂದ ಹೊರಬರಲು ಆಗುತ್ತಿಲ್ಲ. ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಭೀಮೇಶ್ ನಾಯಕ್ ನನ್ನ ಆತ್ಮ ಸ್ನೇಹಿತ ಎಂದು ಡೆತ್ ನೋಟ್ ನಲ್ಲಿ ಆಯಿಶಾ ಬರೆದುಕೊಂಡಿದ್ದಾಳೆ.

ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT