ಸಂಗ್ರಹ ಚಿತ್ರ 
ರಾಜ್ಯ

ವಿವಿ ಸಾಂಸ್ಕೃತಿಕ ಉತ್ಸವದ ವೇಳೆ 2 ಗುಂಪುಗಳ ನಡುವೆ ಘರ್ಷಣೆ: ಹೊಡೆದಾಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು

ಕ್ಷುಲ್ಲಕ ಕಾರಣಕ್ಕೆ ನಗರದ ಪ್ರತಿಷ್ಠಿತ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಸಾಂಸ್ಕೃತಿ ಉತ್ಸವದ ವೇಳೆ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ಎದುರಾಗಿದ್ದು, ಈ ಗಲಾಟೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನಗರದ ಪ್ರತಿಷ್ಠಿತ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಸಾಂಸ್ಕೃತಿ ಉತ್ಸವದ ವೇಳೆ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ಎದುರಾಗಿದ್ದು, ಈ ಗಲಾಟೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ರೇವೇ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ 4ನೇ ವರ್ಷದ ಮೆಕ್ಯಾನಿಕಲ್ ವಿದ್ಯಾರ್ಥಿ ಭಾಸ್ಕರ್ ಜಟ್ಟಿ (22) ಮೃತ ದುರ್ದೈವಿ.

ಮೂಲಗಳ ಪ್ರಕಾರ, ಶುಕ್ರವಾರ ರಾತ್ರಿ 9.30 ರ ಸುಮಾರಿಗೆ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ನೋಡ ನೋಡುತ್ತಿದ್ದಂತೆಯೇ ಗಲಾಟೆ ವಿಕೋಪಕ್ಕೆ ತಿರುಗಿದೆ. ಗುಜರಾತ್ ಮೂಲದ ಭಾಸ್ಕರ್ ಜಟ್ಟಿ ಹೊಟ್ಟೆಗೆ ಹಲವು ಬಾರಿ ಇರಿಯಲಾಗಿದೆ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಆರೋಪಿಗಳ ಬಂಧನಕ್ಕಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಈಶಾನ್ಯ ಡಿಸಿಪಿ ಲಕ್ಷ್ಮಿ ಪ್ರಸಾದ್ ಅವರು ಹೇಳಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ ಎದುರಾಗಿದೆ. ಆದರೆ, ನಿಖರವಾದ ಕಾರಣವೇನು ಎಂಬುದರ ಕುರಿತು ವಿವರಗಳು ಲಭ್ಯವಾಗಿಲ್ಲ.

ವಿದ್ಯಾರ್ಥಿಯೊಬ್ಬರು ಪ್ರತಿಕ್ರಿಯೆ ನೀಡಿ, ಫೋಟೋ ವಿಚಾರಕ್ಕೆ ಮಾತಿನ ಚಕಮಕಿ ಶುರುವಾಗಿತ್ತು. ನಂತರ ಇದೇ ದೊಡ್ಡ ಜಗಳಕ್ಕೆ ಕಾರಣವಾಯಿತು. ಈ ಘರ್ಷಣೆಯಲ್ಲಿ ಜಟ್ಟಿ ಭಾಗಿಯಾಗಿರಲಿಲ್ಲ. ಜಗಳ ಬಿಡಿಸಲಷ್ಟೇ ಆತ ಮುಂದೆ ಹೋಗಿದ್ದ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ವಿದ್ಯಾರ್ಥಿ ಜಟ್ಟಿಯ ಮೃತದೇಹವನ್ನು ಶವಾಗಾರಕ್ಕೆ ವರ್ಗಾಯಿಸಲಾಗಿದ್ದು, ಅಲ್ಲಿ ಶವಪರೀಕ್ಷೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT