ಸಚಿವ ರಾಮಲಿಂಗಾರೆಡ್ಡಿ. 
ರಾಜ್ಯ

ಖಾಸಗಿ ಸಾರಿಗೆ ನಿರ್ವಾಹಕರ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ: ಸಚಿವ ರಾಮಲಿಂಗಾರೆಡ್ಡಿ

ಖಾಸಗಿ ಸಾರಿಗೆ ನಿರ್ವಾಹಕರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧಾರ ಕೈಗೊಳ್ಳಲಿದ್ದಾರೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಸೋಮವಾರ ಹೇಳಿದರು.

ಬೆಂಗಳೂರು: ಖಾಸಗಿ ಸಾರಿಗೆ ನಿರ್ವಾಹಕರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧಾರ ಕೈಗೊಳ್ಳಲಿದ್ದಾರೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಸೋಮವಾರ ಹೇಳಿದರು.

ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ಖಾಸಗಿ ಬಸ್, ಆಟೋ ಮತ್ತು ಕ್ಯಾಬ್ ಯೂನಿಯನ್‌ಗಳೊಂದಿಗೆ ಎರಡನೇ ಸುತ್ತಿನ ಸಭೆಯನ್ನು ಸಚಿವರು ನಡೆಸಿದರು.

ಸಭೆ ಬಳಿಕ ಮಾತನಾಡಿದ ಅವರು, ಖಾಸಗಿ ಬಸ್ ಗಳನ್ನೂ ಶಕ್ತಿ ಯೋಜನೆಯಡಿ ತರಬೇಕು ಹಾಗೂ ತೆರಿಗೆ ಸಡಿಲಿಕೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿರ್ಧಾರ ತೆಗೆದುಕೊಳ್ಳಬೇಕೆಂದು ಹೇಳಿದರು.

ಕ್ಯಾಬ್ ಯೂನಿಯನ್‌ಗಳ ಸದಸ್ಯರು ಮಾತನಾಡಿ, ಸಭೆಯಲ್ಲಿ ಖಾಸಗಿ ಬಸ್, ಆಟೋ ಮತ್ತು ಕ್ಯಾಬ್ ಯೂನಿಯನ್‌ಗಳೊಂದಿಗೆ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವುದು ಮತ್ತು ಖಾಸಗಿ ಕ್ಯಾಬ್ ಅಗ್ರಿಗೇಟರ್‌ಗಳನ್ನು ನಿಯಂತ್ರಿಸುವುದು ಸೇರಿದಂತೆ ಖಾಸಗಿ ಟ್ರಾವೆಲ್ ಆಪರೇಟರ್‌ಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು ಎಂದು ಹೇಳಿದರು.

ಫೆಡರೇಶನ್‌ನ ಸದಸ್ಯ ನಟರಾಜ್ ಶರ್ಮಾ ಅವರು ಮಾತನಾಡಿ, “ಜುಲೈ 24 ರಂದು ನಡೆದ ಮೊದಲ ಸಭೆಯಲ್ಲಿ ಸಚಿವರು ನಮ್ಮ ಸಮಸ್ಯೆಗಳನ್ನು ಆಲಿಸಿದರು. ನಾವು ನಮ್ಮ ಬೇಡಿಕೆಗಳ ಈಡೇರಿಸುವಂತೆ ಮನವಿ ಮಾಡಿಕೊಂಡಿದ್ದೆವು. ಎರಡನೇ ಸಭೆಯಲ್ಲಿ, ನಮ್ಮ ಬೇಡಿಕೆಗಳನ್ನು ಪರಿಹರಿಸಲು ಮತ್ತು ಹೈಕೋರ್ಟಿನಿಂದ ತಡೆಯಾಜ್ಞೆ ತೆರವು ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಎಂದು ಹೇಳಿದರು.

“ಮಹಿಳಾ ಪ್ರಯಾಣಿಕರ ಟಿಕೆಟ್ ವೆಚ್ಚವನ್ನು ಸರ್ಕಾರ ಮರುಪಾವತಿ ಮಾಡುವ, ತೆರಿಗೆ ಸಡಿಲಿಕೆ, ಶಕ್ತಿ ಯೋಜನೆಯಡಿ ಖಾಸಗಿ ಬಸ್‌ಗಳನ್ನು ಸೇರಿಸುವ ನಮ್ಮ ಪ್ರಮುಖ ಬೇಡಿಕೆಗಳನ್ನು ಇನ್ನೂ ಪರಿಹರಿಸಲಾಗಿಲ್ಲ. ಈ ಬೇಡಿಕೆಗಳ ಕುರಿತು ಆಗಸ್ಟ್ 10 ರ ಮೊದಲು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುವುದಾಗಿ ಸಚಿವರು ಭರವಸೆ ನೀಡಿದ್ದಾರೆಂದು ತಿಳಿಸಿದರು.

ಆಗಸ್ಟ್ 10ರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ತಾತ್ಕಾಲಿಕವಾಗಿ ಹಿಂಪಡೆದಿರುವ ಬಂದ್ ಕರೆಯನ್ನು ಮರಳಿ ಆರಂಭಿಸಲಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT