ಶಾಲೆಯ ಕೊಠಡಿಯ ಬಾಗಿಲುಗಳು ಕಪ್ಪು ಹಲಗೆಯಾಗಿ ಬಳಕೆ 
ರಾಜ್ಯ

ಕೊಠಡಿಯ ಬಾಗಿಲೇ ಬ್ಲ್ಯಾಕ್ ಬೋರ್ಡ್; ಕಾರಿಡಾರ್ ನಲ್ಲಿ ಕುಳಿತು ವಿದ್ಯಾರ್ಥಿಗಳ ಕಲಿಕೆ: ಬಳ್ಳಾರಿ ಸರ್ಕಾರಿ ಶಾಲೆಯ ದುಸ್ಥಿತಿ!

ಬಳ್ಳಾರಿ ಜಿಲ್ಲೆಯ ಸಿರಾವರ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಕೊಠಡಿಯ ಬಾಗಿಲುಗಳು ಕಪ್ಪು ಹಲಗೆಯಾಗಿ ಮಾರ್ಪಟ್ಟಿವೆ.

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಿರಾವರ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಕೊಠಡಿಯ ಬಾಗಿಲುಗಳು ಕಪ್ಪು ಹಲಗೆಯಾಗಿ ಮಾರ್ಪಟ್ಟಿವೆ.

ಹೊಸ ಕಟ್ಟಡ ನಿರ್ಮಾಣವಾಗಿದ್ದರೂ ಶಿಕ್ಷಣ ಇಲಾಖೆ ಎಲ್ಲ ಕೊಠಡಿಗಳನ್ನು ತರಗತಿಗಳಿಗೆ ಬಳಸಲು ಅನುಮತಿ ನೀಡದ ಕಾರಣ ಈ ಸಮಸ್ಯೆ ಸೃಷ್ಠಿಯಾಗಿದೆ.  ಇದು ಜಿಲ್ಲಾಡಳಿತ ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿಗೂ ಕಾರಣವಾಗಿದೆ.

ಶಾಲೆಯಲ್ಲಿ 793 ವಿದ್ಯಾರ್ಥಿಗಳಿದ್ದು, ಹಳೆಯ ಕಟ್ಟಡದಲ್ಲಿ ಎಲ್ಲರಿಗೂ ಕೂತು ಪಾಠ ಕೇಳಲು ಸಾಕಾಗುವಷ್ಟು ತರಗತಿ ಕೊಠಡಿಗಳಿಲ್ಲ. ಹೀಗಾಗಿ ಶಿಕ್ಷಕರು ಈಗ ಕೊಠಡಿಗಳ ಹೊರಗೆ ತರಗತಿಗಳನ್ನು ನಡೆಸುತ್ತಿದ್ದಾರೆ ಮತ್ತು ಕೆಲವರು ಬಾಗಿಲುಗಳನ್ನು ಕಪ್ಪು ಹಲಗೆಯಾಗಿ ಬಳಸುತ್ತಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು 18 ಕೊಠಡಿಗಳ ಶಾಲಾ ಕಟ್ಟಡವನ್ನು ಇತ್ತೀಚೆಗೆ ನಿರ್ಮಿಸಿದೆ ಎಂದು ಶಿಕ್ಷಕರೊಬ್ಬರು ಮಾಹಿತಿ ನೀಡಿದ್ದಾರೆ.  ಇದುವರೆಗೂ10 ಕೊಠಡಿಗಳನ್ನು ಹಸ್ತಾಂತರಿಸಲಾಗಿದ್ದು, ಉಳಿದ ಕೊಠಡಿಗಳನ್ನು ಬಳಸಲು ಅನುಮತಿ ನೀಡಿಲ್ಲ.

ಸಾಮಾನ್ಯವಾಗಿ ಶಿಕ್ಷಕರು ಕಪ್ಪು ಹಲಗೆಗಳನ್ನು ಒಯ್ಯುತ್ತಾರೆ. ಇತ್ತೀಚೆಗೆ, ಶಿಕ್ಷಕರೊಬ್ಬರು ಬಾಗಿಲನ್ನು ಕಪ್ಪು ಹಲಗೆಯಾಗಿ ಬಳಸಿ 4 ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಪಾಠ ಕಲಿಸಿದ್ದಾರೆ. ಉಳಿದ ತರಗತಿ ಕೊಠಡಿಗಳನ್ನು ಬಳಸಲು ಅನುಮತಿ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ  ಅಲ್ಲದೆ, ಕೆಲವು ಕೊಠಡಿಗಳಲ್ಲಿ ಬಾಗಿಲು ಮತ್ತು ಕಿಟಕಿಗಳನ್ನು ಸರಿಪಡಿಸಬೇಕಾಗಿದೆ. ಅದು ಮುಗಿದ ನಂತರ, ಕೊಠಡಿಗಳನ್ನು ನಮಗೆ ಹಸ್ತಾಂತರಿಸಲಾಗುತ್ತದೆ ಎಂದು ಶಿಕ್ಷಕರುೊಬ್ಬರು ವಿವರಿಸಿದ್ದಾರೆ.

ಸರಕಾರಿ ಶಾಲೆಯ ದುಸ್ಥಿತಿ ನೋಡಿದರೆ ನಾಚಿಕೆಯಾಗುತ್ತಿದೆ ಎಂದು ಗ್ರಾಮದ ರಮೇಶ್ ಬಿ. ಬೇಸರ ವ್ಯಕ್ತ ಪಡಿಸಿದ್ದಾರೆ. ಅವರು ಬಾಗಿಲನ್ನು ಕಪ್ಪು ಹಲಗೆಯಾಗಿ ಬಳಸಿದ್ದು ಶಿಕ್ಷಕರ ತಪ್ಪು ಅಲ್ಲ. ಕನಿಷ್ಠ ಸಮಯ ವ್ಯರ್ಥ ಮಾಡುವ ಬದಲು ವಿದ್ಯಾರ್ಥಿಗಳಿಗೆ ಕಲಿಸಲು ಪ್ರಯತ್ನಿಸಿದರು. ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ. 

ಸರಿಯಾದ ಶೌಚಾಲಯಗಳಿಲ್ಲ, ಕುಡಿಯುವ ನೀರಿನ ಸಮಸ್ಯೆಯೂ ಇದೆ. ಇತ್ತೀಚೆಗೆ ಸುರಿದ ಮಳೆಯಿಂದ ಶಾಲಾ ಆವರಣ ಕೆರೆಯಂತಾಗಿತ್ತು. ಆದರೆ ಇದ್ಯಾವುದನ್ನು  ಲೆಕ್ಕಿಸದೆ ಶಿಕ್ಷಕರು ಮಕ್ಕಳಿಗೆ ಪಾಠ ಮಾಡುತ್ತಲೇ ಇದ್ದಾರೆ. ಜಿಲ್ಲಾಡಳಿತ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT