ಡಾ.ಶಿವರಾಜ್ ಕುಮಾರ್ ಜೊತೆಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ 
ರಾಜ್ಯ

ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳಿಗೆ ಶಿವಣ್ಣ ನೂತನ ರಾಯಬಾರಿ!

ಕರ್ನಾಟಕದ ಹೆಮ್ಮೆ ನಂದಿನಿ ಬ್ರ್ಯಾಂಡ್ ಉತ್ಪನ್ನಗಳಿಗೆ ನೂತನ ರಾಯಭಾರಿಯಾಗಿ ಡಾ. ಶಿವರಾಜ್ ಕುಮಾರ್ ನೇಮಕವಾಗಿದ್ದಾರೆ. ಸುಮಾರು ವರ್ಷಗಳ ಕಾಲ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರಾಯಭಾರಿಯಾಗುವ ಮೂಲಕ ನಂದಿನಿ ಉತ್ಪನ್ನಗಳಿಗೆ ಪ್ರಚಾರ ಮಾಡಿದ್ದರು.

ಬೆಂಗಳೂರು: ಕರ್ನಾಟಕದ ಹೆಮ್ಮೆ ನಂದಿನಿ ಬ್ರ್ಯಾಂಡ್ ಉತ್ಪನ್ನಗಳಿಗೆ ನೂತನ ರಾಯಭಾರಿಯಾಗಿ ಡಾ. ಶಿವರಾಜ್ ಕುಮಾರ್ ನೇಮಕವಾಗಿದ್ದಾರೆ. ಸುಮಾರು ವರ್ಷಗಳ ಕಾಲ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರಾಯಭಾರಿಯಾಗುವ ಮೂಲಕ ನಂದಿನಿ ಉತ್ಪನ್ನಗಳಿಗೆ ಪ್ರಚಾರ ಮಾಡಿದ್ದರು. ಆದರೆ, ಅವರ ಆಗಲಿಕೆ ಬಳಿಕ ಮುಂದಿನ ರಾಯಬಾರಿ ಯಾರು?ಎಂಬ ಪ್ರಶ್ನೆ ಎದ್ದಿತ್ತು.

ಇದೀಗ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ಅವರಿಂದು ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ರಾಯಭಾರಿಯಾಗುವಂತೆ ಕೋರಿದ್ದು, ಅದಕ್ಕೆ ಶಿವಣ್ಣ ಅನುಮತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಕೆಎಂಎಫ್ ನ ನಂದಿನಿ ಹಾಲು ಹಾಗೂ ಅದರ ಉತ್ಪನ್ನಗಳನ್ನು ಪ್ರಚಾರ ಮಾಡುವುದಕ್ಕೆ ಶಿವಣ್ಣ ಒಪ್ಪಿರುವುದಕ್ಕೆ ಅವರಿಗೆ ಹಾಲು ಒಕ್ಕೂಟ ಅಭಿನಂದನೆ ಸಲ್ಲಿಸಿದೆ. ಈ ಹಿಂದೆ ಪುನೀತ್ ರಾಜ್ ಕುಮಾರ್ ಅಷ್ಟೇ ಅಲ್ಲದೇ, ಡಾ. ರಾಜ್ ಕುಮಾರ್ ಕೂಡಾ ನಂದಿನಿ ಹಾಲಿಗೆ ರಾಯಬಾರಿಯಾಗಿ ಪ್ರಚಾರ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT