ಎಚ್.ಸಿ ಮಹಾದೇವಪ್ಪ 
ರಾಜ್ಯ

ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ನಿಗದಿತ ಉದ್ದೇಶಕ್ಕೆ ಬಳಕೆ: ಸಚಿವ ಎಚ್.ಸಿ. ಮಹಾದೇವಪ್ಪ

ಸರ್ಕಾರದ ಖಾತರಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಐದು ಇಲಾಖೆಗಳು ಸೇರಿದಂತೆ 40 ವಿವಿಧ ಇಲಾಖೆಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿಯಲ್ಲಿ ಹಣವನ್ನು ಹಂಚಲಾಗಿದೆ ಎಂದು ಸಚಿವ ಮಹಾದೇವಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಅನುದಾನದಲ್ಲಿ (ಎಸ್‌ಸಿಎಸ್‌ಪಿ– ಟಿಎಸ್‌ಪಿ) 11 ಸಾವಿರ ಕೋಟಿಯನ್ನು ಐದು ‘ಗ್ಯಾರಂಟಿ’ಗಳ ಜಾರಿಗಾಗಿ ಬಳಕೆ ಮಾಡುವ ಸರ್ಕಾರದ ಉದ್ದೇಶ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ ಎಂದು ಹೇಳಿರುವ ಸಚಿವ ಮಹಾದೇವಪ್ಪ ಯಾವುದೇ ಹಣ ವ್ಯತ್ಯಯವಾಗಿಲ್ಲ, ನಿಗಧಿತ ಉದ್ದೇಶಕ್ಕೆ ಬಳಸಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರದ ಖಾತರಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಐದು ಇಲಾಖೆಗಳು ಸೇರಿದಂತೆ 40 ವಿವಿಧ ಇಲಾಖೆಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿಯಲ್ಲಿ ಹಣವನ್ನು ಹಂಚಲಾಗಿದೆ ಎಂದು ಅವರು ಹೇಳಿದರು.

2023-24ಕ್ಕೆ ಎಸ್‌ಸಿಎಸ್‌ಪಿ/ಟಿಎಸ್‌ಪಿಗಾಗಿ ರೂ.34,293.69 ಕೋಟಿ ಕ್ರಿಯಾ ಯೋಜನೆಯನ್ನು ಸರ್ಕಾರ ಸೋಮವಾರ ಅನುಮೋದಿಸಿದೆ. ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

156 ವಸತಿ ಶಾಲೆಗಳು ಮತ್ತು ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ 75 ಹಾಸ್ಟೆಲ್‌ಗಳ ಕಾಮಗಾರಿ ಕಳೆದ ಮೂರು ತಿಂಗಳಿಂದ ಸ್ಥಗಿತಗೊಂಡಿದೆ ಎಂದು ಬಿಜೆಪಿಯ ಹಿರಿಯ ನಾಯಕ ಗೋವಿಂದ್ ಕಾರಜೋಳ  ಆರೋಪಿಸಿದ್ದಾರೆ. 108 ವಸತಿ ಶಾಲೆಗಳಿಗೆ ಸರಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ದೂರಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನದ ಲಡ್ಡುಗಳಿಗಾಗಿ ಕೆಎಂಎಫ್ ತುಪ್ಪ ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಎಂಎಲ್‌ಸಿ ಎನ್ ರವಿಕುಮಾರ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯವು 2022 ರಲ್ಲಿ ಟಿಟಿಡಿಗೆ 13 ಲಕ್ಷ ಕೆಜಿ ತುಪ್ಪವನ್ನು ಮಾರಾಟ ಮಾಡಿತ್ತು, ಆದರೆ ಕಾಂಗ್ರೆಸ್ ಸರ್ಕಾರ ಅದನ್ನು ಮಾಡಲು ವಿಫಲವಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT