ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕುಡಿದ ಅಮಲಿನಲ್ಲಿ ಸ್ನೇಹಿತರಿಂದಲೇ ವ್ಯಕ್ತಿಯ ಹತ್ಯೆ

ಕುಡಿದ ಅಮಲಿನಲ್ಲಿ ಸ್ನೇಹಿತರೇ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆಯೊಂದು ನಗರದ ಹೊರವಲಯದ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ  ನಡೆದಿದೆ.

ಬೆಂಗಳೂರು: ಕುಡಿದ ಅಮಲಿನಲ್ಲಿ ಸ್ನೇಹಿತರೇ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆಯೊಂದು ನಗರದ ಹೊರವಲಯದ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ  ನಡೆದಿದೆ.

ಮೃತರನ್ನು ಮಹಮ್ಮದ್ ಗುಡ್ಡು ಮನ್ಸೂರ್ (38) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಚರಣ್ ಮತ್ತು ನಾರಾಯಣಪ್ಪ ಎಂದು ಗುರ್ತಿಸಲಾಗಿದೆ .ಇಬ್ಬರು ಆರೋಪಿಗಳನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಬ್ಬರೂ ಮನ್ಸೂನ್ ನನ್ನು ಪಾರ್ಟಿಗೆ ಆಹ್ವಾನಿಸಿದ್ದು, ಖಾಲಿ ಜಮೀನಿನಲ್ಲಿ ಮೂವರೂ ಮದ್ಯ ಸೇವಿಸಿದ್ದಾರೆ. ಬಳಿಕ ಇಬ್ಬರ ನಡುವೆ ಜಗಳ ನಡೆದಿದೆ ಈ ವೇಳೆ ಆರೋಪಿಗಳು ಮನ್ಸೂರ್ ತಲೆಗೆ ಇಟ್ಟಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಬಳಿಕ ಆರೋಪಿ ನಾರಾಯಣಪ್ಪ ಮನ್ಸೂರ್ ಶವವನ್ನು ದ್ವಿಚಕ್ರ ವಾಹನದಲ್ಲಿ ಗ್ರಾಮಕ್ಕೆ ತೆಗೆದುಕೊಂಡು ಹೋಗಿದ್ದಾನೆ. ಬಳಿಕ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಸ್ಥಳಕ್ಕೆ ಬಂದ ಪೊಲೀಸರು ನಾರಾಯಣಪ್ಪನನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಚರಣ್ ಜೊತೆಗೆ ಸೇರಿ ಮನ್ಸೂರ್ ನನ್ನು ಹತ್ಯೆ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ.

ಇದರಂತೆ ಆರೋಪಿಗಳಿಬ್ಬರನ್ನೂ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ತನ್ನ ಪತ್ನಿಯೊಂದಿಗೆ ಮನ್ಸೂರ್ ಅಕ್ರಮ ಸಂಬಂಧ ಹೊಂದಿದ್ದ ಎಂದು ಚರಣ್ ಶಂಕಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT