ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವುಗದು 
ರಾಜ್ಯ

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಯುವತಿ ಸಾವು: ಸ್ಥಳೀಯರ ಪ್ರತಿಭಟನೆ, ಹಲವರು ಅಸ್ವಸ್ಥ

ಕೋಟೆನಾಡು ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಯುವತಿ ನಿನ್ನೆ ಮೃತಪಟ್ಟು ಅಸ್ವಸ್ಥಕ್ಕೀಡಾಗಿರುವವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ. 

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಯುವತಿ ನಿನ್ನೆ ಮೃತಪಟ್ಟು ಹಲವರು ಅಸ್ವಸ್ಥಕ್ಕೀಡಾಗಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ. 

ಮೃತ ಯುವತಿಯನ್ನು 21 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ. ಅಸ್ವಸ್ಥಕ್ಕೀಡಾಗಿರುವವರನ್ನು ಬಸವೇಶ್ವರ ಖಾಸಗಿ ಮತ್ತು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಯುವತಿ ಮಂಜುಳಾ ಮೃತದೇಹವನ್ನು ಜಿಲ್ಲಾಧಿಕಾರಿಗಳು ಬರುವವರೆಗೆ ತೆರವುಗೊಳಿಸುವುದಿಲ್ಲ ಎಂದು ಕವಾಡಿಗರಹಟ್ಟಿ ಜನರು ಪಟ್ಟು ಹಿಡಿದು ಕುಳಿತಿದ್ದು, ನಗರಸಭೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮೃತ ಯುವತಿಯ ಶವವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶವಾಗಾರದಲ್ಲಿ ಪರಿಶೀಲನೆ ನಡೆಸಿದರು. ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿ ಬಡಾವಣೆಗೆ ನಗರಸಭೆಯಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿತ್ತು. ಈ ನೀರು ಸೇವಿಸಿ ಜನರು ಏಕಾಏಕಿ ಅಸ್ವಸ್ಥಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?