ಸಾಂದರ್ಭಿಕ ಚಿತ್ರ 
ರಾಜ್ಯ

ಗಂಡ-ಹೆಂಡ್ತಿ ಜಗಳ: ಕೋಪದಿಂದ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಭೂಪ, FIR ದಾಖಲು

ಗಂಡ-ಹೆಂಡ್ತಿ ಜಗಳ ವಿಕೋಪಕ್ಕೆ ತಿರುಗಿ ಕೋಪದಿಂದ ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಕೈ ಬೆರಳನ್ನೇ ಕಚ್ಚಿ ತಿಂದಿರುವ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಗಂಡ-ಹೆಂಡ್ತಿ ಜಗಳ ವಿಕೋಪಕ್ಕೆ ತಿರುಗಿ ಕೋಪದಿಂದ ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಕೈ ಬೆರಳನ್ನೇ ಕಚ್ಚಿ ತಿಂದಿರುವ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೊಣನಕುಂಟೆ (Konanakunte) ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಂಡ-ಹೆಂಡತಿ ಜಗಳದ ವೇಳೆ ಪತಿರಾಯ ತನ್ನ ಪತ್ನಿಯ ಕೈ ಬೆರಳನ್ನೇ ಕಚ್ಚಿ ತಿಂದಿದ್ದಾನೆ. ಆರೋಪಿ ಪತಿಯನ್ನು ವಿಜಯಕುಮಾರ್ ಎಂದು ಗುರುತಿಸಲಾಗಿದ್ದು, ಸಂತ್ರಸ್ಥೆ ಪತ್ನಿ ಹೆಸರು ಪುಷ್ಪಾ ಎಂದು ಹೇಳಲಾಗಿದೆ. 

ಪೊಲೀಸರ ಪ್ರಕಾರ ಈ ಘಟನೆ ಜುಲೈ 28 ರಂದು ನಡೆದಿದೆ. ಪುಷ್ಪಾ ಎಂಬ ಮಹಿಳೆಯು ಗಂಡನ ಕಾಟ ತಾಳಲಾರದೇ ತನ್ನ ಮಗನ ಜೊತೆಗೆ ಬೇರೆ ಮನೆ ಮಾಡಿ ವಾಸವಿದ್ದರು. ಆದರೂ ಕೂಡ ಆಕೆಗೆ ಗಂಡನ ಕಾಟದಿಂದ ಮುಕ್ತಿ ಸಿಕ್ಕಿರಲಿಲ್ಲ. ಅದರಂತೆ ಇಬ್ಬರು ಜಗಳ ಮಾಡುತ್ತಿದ್ದಾರೆ. ಈ ವೇಳೆ ಏಕಾಎಕಿ ಪತಿ ವಿಜಯಕುಮಾರ್ ಪತ್ನಿಯ ಬೆರಳನ್ನೇ ಕಚ್ಚಿ ತಿಂದಿದ್ದಾನೆ. ನಂತರ ನಿನ್ನನ್ನೂ ಕೂಡ ಕೊಂದು ಇದೇ ರೀತಿಯಾಗಿ ತಿನ್ನುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಪುಷ್ಪಾ ಮತ್ತು ವಿಜಯ್​ಕುಮಾರ್​ಗೆ 23 ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಕೆಲ ವರ್ಷಗಳಿಂದ ಪತ್ನಿಗೆ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಈ ಹಿನ್ನಲೆ ಗಂಡನಿಂದ ಬೇಸತ್ತು ತನ್ನ ಮಗನ ಜೊತೆ ಬೇರೆಡೆ ಮನೆ ಮಾಡಿಕೊಂಡಿದ್ದರು. ಕಳೆದ‌ ತಿಂಗಳ ಜುಲೈ 28ನೇ ತಾರೀಖು ಪತಿ ವಿಜಯಕುಮಾರ್ ಪತ್ನಿ ಇದ್ದ ಮನೆಗೆ ಹೋಗಿ ಜಗಳ ತೆಗೆದಿದ್ದ. ಈ ವೇಳೆ ಪತ್ನಿಯ ಎಡಗೈ ಬೆರಳನ್ನೇ ಕಚ್ಚಿ ಕಚ್ಚಿ ತಿಂದಿದ್ದಾನಂತೆ. ಅಲ್ಲದೇ ರೌಡಿಶೀಟರ್​ಗಳನ್ನ ಬಿಟ್ಟು ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಪತ್ನಿ ಪುಷ್ಪ ಸದ್ಯ ಪತಿಯ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT