ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾದವರು 
ರಾಜ್ಯ

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣ, ಪಂಪ್ ಆಪರೇಟರ್ ಸಸ್ಪೆಂಡ್

ನಗರದ ಕವಾಡಿಗರಹಟ್ಪಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, 100ಕ್ಕೂ ಅಧಿಕ ಮಂದಿ ಅಸ್ವಸ್ವರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿತ್ರದುರ್ಗ: ನಗರದ ಕವಾಡಿಗರಹಟ್ಪಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, 100ಕ್ಕೂ ಅಧಿಕ ಮಂದಿ ಅಸ್ವಸ್ವರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ಉದ್ಯೋಗಿಯಾಗಿರುವ ಪಂಪ್ ಆಪರೇಟರ್ ಸಿ.ಹೆಚ್. ಪ್ರಕಾಶ್ ಬಾಬು ಅವರನ್ನು ಜಿಲ್ಲಾಧಿಕಾರಿ ಜಿಆರ್ ಜೆ ದಿವ್ಯಪ್ರಭು ಅಮಾನತು ಮಾಡಿದ್ದಾರೆ. ಅಲ್ಲದೇ, ಹೊರ ಏಜೆನ್ಸಿಗಳಿಂದ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡಿದ್ದ ಇಬ್ಬರನ್ನು ಹುದ್ದೆಯಿಂದ ಕಿತ್ತುಹಾಕಲಾಗಿದೆ. ಅಲ್ಲದೇ.  ಎಇಇ ಮಂಜುನಾಥ್ ಆರ್.ಗಿರಡ್ಡಿ ಮತ್ತು ಕಿರಿಯ ಎಂಜಿನಿಯರ್ ಕಿರಣ್ ಅವರನ್ನು ಅಮಾನತುಗೊಳಿಸಲು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಇನ್ನೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ವರದಿ ಬಹಿರಂಗವಾಗಿದೆ. ವಾಂತಿ, ಭೇದಿ ಪ್ರಕರಣಗಳ ಕುರಿತು ಕುಡಿಯುವ ನೀರಿನ ಮಾದರಿ ಹಾಗೂ ಮಲದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದ್ದು, ನೀರು ‘ಕುಡಿಯಲು ಯೋಗ್ಯವಲ್ಲದ್ದು’ ಎಂದು ಹೇಳಲಾಗಿದೆ ಮತ್ತು ಮಲದ ಮಾದರಿಗಳಲ್ಲಿ ವೈಬ್ರಿಯೋ ಸ್ಪೀಸೀಸ್ ಗ್ರೋನ್ ಕಲ್ಚರ್, (ನೀರಿನ ಸೂಕ್ಷ್ಮಾಣು ಜೀವಿಗಳು) ಇದ್ದವೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದರಲ್ಲಿ ಕಾಲರಾ ಮಾದರಿ ಅಂಶ ಪತ್ತೆಯಾಗಿದೆ. ಇನ್ನು ಪ್ರಕರಣ ಸಂಬಂಧ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಾಕಿ ಇದೆ. 

ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ: ಘಟನೆ ಕುರಿತಂತೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ತನಿಖೆಗೆ ಆದೇಶಿಸಿದ್ದು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಈ ತಂಡ ಸ್ಥಳ ಪರಿಶೀಲನೆ ಮಾಡಿ ಮೂರು ದಿನಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ.

 ಅಸ್ವಸ್ಥರ ಆರೋಗ್ಯ ವಿಚಾರಿಸಿದ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ, ಕಲು‍‍ಷಿತ ನೀರು ಸೇವಿಸಿ ಮೃತರಾದವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು. ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT