ತುಂಗಾಭದ್ರಾ ಜಲಾಶಯ( ಸಂಗ್ರಹ ಚಿತ್ರ) 
ರಾಜ್ಯ

ಜಲಾಶಯಗಳು ಇನ್ನೂ ತುಂಬಿಲ್ಲ; ಬೇಕಾಬಿಟ್ಟಿ ಬಳಸಬೇಡಿ, ವಿವೇಚನೆಯಿಂದ ನೀರು ಉಪಯೋಗಿಸಿ: ತಜ್ಞರ ಸಲಹೆ

ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ ಉತ್ತಮ ಮುಂಗಾರು ಮಳೆಯಾಗಿದೆ, ಆದರೂ ಜಲಾಶಯಗಳು ತುಂಬುವಷ್ಟು ಪ್ರಮಾಣದಲ್ಲಿ ಮಳೆಸುರಿದಿಲ್ಲ ಎಂದು ತಜ್ಞರು ಮತ್ತು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರು: ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ ಉತ್ತಮ ಮುಂಗಾರು ಮಳೆಯಾಗಿದೆ, ಆದರೂ ಜಲಾಶಯಗಳು ತುಂಬುವಷ್ಟು ಪ್ರಮಾಣದಲ್ಲಿ ಮಳೆಸುರಿದಿಲ್ಲ ಎಂದು ತಜ್ಞರು ಮತ್ತು ಅಧಿಕಾರಿಗಳು ಹೇಳಿದ್ದಾರೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಅಂಕಿಅಂಶಗಳ ಪ್ರಕಾರ, ಜಲಾಶಯಗಳು ಶೇ. 67 ರಷ್ಟು ತುಂಬಿವೆ. ಒಳಹರಿವು ಕಡಿಮೆ ಇರುವ ಕಾರಣ  ನೀರನ್ನು ವಿವೇಚನೆಯಿಂದ ಬಳಸಬೇಕು ಎಂದು ಅಧಿಕಾರಿಗಳು ಮತ್ತು ತಜ್ಞರು ಸರ್ಕಾರಕ್ಕೆ ಸೂಚಿಸಿದ್ದಾರೆ.

ಜಲಾನಯನ ಪ್ರದೇಶಗಳಲ್ಲಿ ಮಳೆಯಿಲ್ಲದೆ, ನೈಋತ್ಯ ಮಾನ್ಸೂನ್ ದುರ್ಬಲವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿರುವುದರಿಂದ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಉತ್ತಮವಾಗಿರುವಂತೆ ತೋರುತ್ತಿಲ್ಲ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ನೀರನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಎಲ್ಲ ಪಾಲುದಾರರಿಗೆ ನಿರ್ದೇಶನಗಳನ್ನು ನೀಡಬೇಕೆಂದು ನಾವು ಜಲಸಂಪನ್ಮೂಲ ಇಲಾಖೆ ಮತ್ತು ರಾಜ್ಯ ಸರ್ಕಾರಕ್ಕೆ ವಿನಂತಿಸುತ್ತಿದ್ದೇವೆ ಎಂದಿದ್ದಾರೆ.

ಯಾವುದೇ ಕೊರತೆಯಾಗದಂತೆ ನೀರಿನ ಪರ್ಯಾಯ ಮೂಲಗಳನ್ನು ಸಹ  ಹುಡುಕಬೇಕಾಗಿದೆ. ಆದೇಶಗಳ ಹೊರತಾಗಿಯೂ ಅಂತರ್ಜಲ ಮಟ್ಟವನ್ನು ಮರುಪೂರಣಗೊಳಿಸುವುದು ಮತ್ತು ಮಳೆನೀರು ಕೊಯ್ಲುಗಳನ್ನು ಹೆಚ್ಚೆಚ್ಚು ಕೈಗೊಳ್ಳದಿರುವುದು ಅತ್ಯಂತ ದುರದೃಷ್ಟಕರ ಎಂದು ಅಧಿಕಾರಿಯೊಬ್ಬರು ಹೇಳಿದರು.

ಜಲಾಶಯಗಳಿಗೆ ನೀರಿನ ಒಳಹರಿವು ಕಡಿಮೆಯಾಗಿದೆ ಎಂದು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಒಳಹರಿವು ಈಗ 35-40 ಟಿಎಂಸಿಯಿಂದ 17 ಟಿಎಂಸಿಗೆ ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಮೈಲಿಗಲ್ಲು ಸಾಧಿಸಿದ Kohli

SCROLL FOR NEXT