ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ಕಡತ ವಿಲೇವಾರಿ: ಕಂದಾಯ ಇಲಾಖೆಗೆ 2ನೇ ಸ್ಥಾನ- ಸಚಿವ ಕೃಷ್ಣ ಬೈರೇಗೌಡ

ಯಾವುದೇ ವಿಳಂಬವಿಲ್ಲದೆ ಕಡತಗಳನ್ನು ತೆರವುಗೊಳಿಸಲು ಕಂದಾಯ ಇಲಾಖೆ ಹೆಚ್ಚಿನ ಒತ್ತು ನೀಡುತ್ತಿದ್ದು, ಇದರಂತೆ ಇತರೆ ಇಲಾಖೆಗಳ ಪೈಕಿ ಕಂದಾಯ ಇಲಾಖೆ 2ನೇ ಸ್ಥಾನದಲ್ಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.

ಬೆಂಗಳೂರು: ಯಾವುದೇ ವಿಳಂಬವಿಲ್ಲದೆ ಕಡತಗಳನ್ನು ತೆರವುಗೊಳಿಸಲು ಕಂದಾಯ ಇಲಾಖೆ ಹೆಚ್ಚಿನ ಒತ್ತು ನೀಡುತ್ತಿದ್ದು, ಇದರಂತೆ ಇತರೆ ಇಲಾಖೆಗಳ ಪೈಕಿ ಕಂದಾಯ ಇಲಾಖೆ 2ನೇ ಸ್ಥಾನದಲ್ಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.

ರಾಜ್ಯದ 40 ಕ್ಕೂ ಹೆಚ್ಚು ಇಲಾಖೆಗಳ ಪೈಕಿ ಕಂದಾಯ ಇಲಾಖೆಯ ಕಾರ್ಯಕ್ಷಮತೆ ಎರಡನೇ ಸ್ಥಾನದಲ್ಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೊದಲ ಸ್ಥಾನದಲ್ಲಿದೆ. ಈವರೆಗೆ ಇಲಾಖೆಯಲ್ಲಿ ಬಾಕಿ ಉಳಿದಿದ್ದ ಕಡತಗಳನ್ನು ವಿಲೇವಾರಿ ಮಾಡಲು ಆದ್ಯತೆ ನೀಡಲಾಗಿದೆ. ಹೊಸದಾಗಿ 2,123 ಕಡತಗಳು ಬಂದಿವೆ. ಈ ಕಡತಗಳನ್ನೂ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

‘ಕಡತಗಳ ವಿಲೇವಾರಿ ವಿಚಾರದಲ್ಲಿ ಕಂದಾಯ ಇಲಾಖೆ ಈವರೆಗೆ 'ಎ' ವರ್ಗದ ಕಾರ್ಯಕ್ಷಮತೆ ಪ್ರದರ್ಶಿಸಿಲ್ಲ. ಆದರೆ, ನಾವು ಕಡತ ವಿಲೇವಾರಿ ವಿಚಾರದಲ್ಲಿ 'ಎ' ವರ್ಗದ ಜೊತೆಗೆ, ಎಲ್ಲ ಇಲಾಖೆಗಳ ಪೈಕಿ ಎರಡನೇ ಸ್ಥಾನದಲ್ಲಿದ್ದೇವೆ. ದೊಡ್ಡ ಇಲಾಖೆಗಳ ಪೈಕಿ ಮೊದಲ ಸ್ಥಾನದಲ್ಲಿದ್ದೇವೆ’ ಎಂದು ತಿಳಿಸಿದರು.

ಹಲವು ವರ್ಷಗಳಿಂದ ಬಾಕಿ ಇರುವ ಕಡತಗಳನ್ನು ತ್ವರಿತವಾಗಿ ತೆರವುಗೊಳಿಸುತ್ತೇವೆ. ಅಲ್ಲದೆ, ಪೇಪರ್‌ರಹಿತ ಡಿಜಿಟಲ್ ಸೇವೆ ಸೇರಿದಂತೆ ಏನೆಲ್ಲಾ ಸಾಧ್ಯತೆಗಳಿವೆಯೋ ಅದೆಲ್ಲವನ್ನೂ ಬಳಸಿಕೊಂಡು ಅತ್ಯಂತ ವೇಗವಾಗಿ ಕಡತಗಳನ್ನು ವಿಲೇವಾರಿ ಮಾಡಲು ಇಲಾಖೆ ಬದ್ಧವಾಗಿದೆ. ಉತ್ತಮ ಆಡಳಿತ ನಮ್ಮ ಗುರಿ’ ಎಂದರು.

‘ಕಂದಾಯ ಇಲಾಖೆಯಲ್ಲಿ ಸಕಾರಾತ್ಮಕ ಬದಲಾವಣೆ ತರಬೇಕು ಎಂಬ ನಿಟ್ಟಿನಲ್ಲಿ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಮೇಲೆ ಭರವಸೆ ಇಟ್ಟು ಜವಾಬ್ದಾರಿ ನೀಡಿದರು. ಅಧಿಕಾರ ವಹಿಸಿದ ಎರಡು ತಿಂಗಳಿನಿಂದ ಇಡೀ ಇಲಾಖೆಗೆ ಚುರುಕು ಮುಟ್ಟಿಸಿ ಎಲ್ಲಾ ಕಡತಗಳನ್ನೂ ತ್ವರಿತವಾಗಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT