ಹಾರಂಗಿ ನೀರಿನಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿರುವುದು 
ರಾಜ್ಯ

ಕೊಡಗು: ಸೇತುವೆ ಮೇಲೆ ನಿಂತು ಸೆಲ್ಫಿ ತೆಗೆಯುವ ವೇಳೆ ನೀರಿಗೆ ಬಿದ್ದು ಬೆಂಗಳೂರಿನ ವ್ಯಕ್ತಿ ಸಾವು

ಪ್ರವಾಸಿಗರೊಬ್ಬರು ಕೊಡಗಿನ ಹಾರಂಗಿ ಜಲಾಶಯದ ಕೆಳಭಾಗದ ಸೇತುವೆ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ನೀರಿಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪ್ರವಾಸಿಗನ ಪತ್ತೆಗಾಗಿ ಗುರುವಾರ ಸಂಜೆಯವರೆಗೂ ಶೋಧ

ಮಡಿಕೇರಿ: ಪ್ರವಾಸಿಗರೊಬ್ಬರು ಕೊಡಗಿನ ಹಾರಂಗಿ ಜಲಾಶಯದ ಕೆಳಭಾಗದ ಸೇತುವೆ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ನೀರಿಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪ್ರವಾಸಿಗನ ಪತ್ತೆಗಾಗಿ ಗುರುವಾರ ಸಂಜೆಯವರೆಗೂ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ಬೆಂಗಳೂರಿನಿಂದ ಕೊಡಗಿಗೆ ಪ್ರವಾಸಕ್ಕೆ ತೆರಳಿದ್ದ ಸಂದೀಪ್, ಗೋವಿಂದರಾಜು, ರಾಮ್‌ಕುಮಾರ್ ಮತ್ತು ರಂಜಿತ್ ಅವರು ಇಂದು ಸಂಜೆ ನಾಲ್ವರು ಹಾರಂಗಿ ಸೇತುವೆಯ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ವೃತ್ತಿಯಲ್ಲಿ ಟ್ಯಾಟೂ ಕಲಾವಿದರಾಗಿರುವ ಸಂದೀಪ್(46) ಅವರು ಸೇತುವೆಯ ಅಂಚಿನಿಂದ ಸೆಲ್ಫಿ ಕ್ಲಿಕ್ಕಿಸಲು ಹೋಗಿ  ಜಾರಿ ನೀರಿಗೆ ಬಿದ್ದಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸಂದೀಪ್‌ಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದು, ಜಲಾಶಯದಿಂದ ನೀರು ಹೊರಬಿಡುವುದನ್ನು ನಿಲ್ಲಿಸಿದ್ದಾರೆ. ಘಟನೆ ನಡೆದಾಗ ಪ್ರವಾಸಿಗರು ಕುಡಿದ ಅಮಲಿನಲ್ಲಿದ್ದ ಶಂಕೆ ವ್ಯಕ್ತವಾಗಿದೆ.

ದುಬಾರೆಯಿಂದ ತೆಪ್ಪದ ತಂಡಗಳು ಆಗಮಿಸಿದ್ದು, ಶೋಧ ಕಾರ್ಯದಲ್ಲಿ ತೊಡಗಿವೆ ಎಂದು ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಗಂಗಾಧರಪ್ಪ ಆರ್‌ವಿ ಅವರು ತಿಳಿಸಿದ್ದಾರೆ.

ಘಟನೆ ನಡೆದ ಸೇತುವೆಯನ್ನು ಸ್ಥಳೀಯರು ನಿತ್ಯ ಸಂಚಾರಕ್ಕೆ ಬಳಸುತ್ತಾರೆ. ಹಾರಂಗಿ ಜಲಾಶಯದಿಂದ ಹೊರಹರಿವು 15 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚಾದಾಗ ಮಾತ್ರ ಸೇತುವೆ ಜಲಾವೃತಗೊಳ್ಳುತ್ತದೆ ಎಂದು ಮೂಲಗಳು ತಿಳಿಸಿವೆ.

ಘಟನೆ ನಡೆದ ಸಂದರ್ಭದಲ್ಲಿ ಜಲಾಶಯದಿಂದ ಹೊರಹರಿವು 2,000 ಕ್ಯೂಸೆಕ್‌ಗಿಂತ ಕಡಿಮೆಯಿತ್ತು ಎಂದು ಹಾರಂಗಿ ಇಇ ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್